ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವು: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ

KannadaprabhaNewsNetwork | Published : Jun 6, 2024 12:30 AM

ಸಾರಾಂಶ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮಾಡಿಕೊಂಡ ತಪ್ಪಿನಿಂದ 46 ಸಾವಿರ ಅಂತರದಿಂದ ಗೆದ್ದಿದ್ದ ಶಾಸಕರಿಗೆ ನಾವು ಮೈತ್ರಿ ಅಭ್ಯರ್ಥಿಗೆ 10 ಸಾವಿರ ಲೀಡ್ ಕೊಡುವ ಮೂಲಕ ತಿರುಗೇಟು ನೀಡಿದ್ದೇವೆ. ಮಳವಳ್ಳಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ 50 ಸಾವಿರ ಮತ ಲೀಡ್ ಕೊಡುತ್ತೇವೆ ಎನ್ನುತ್ತಿದ್ದರು. ಅದನ್ನು ಸುಳ್ಳಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸುತ್ತಿದ್ದಂತೆಯೇ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಪಟ್ಟಣದ ಅನಂತ ರಾಂ ವೃತ್ತ ಬಳಿ ಸೇರಿದ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜೈಕಾರ ಹಾಕಿ ಸಂಭ್ರಮಾಚರಣೆ ಮಾಡಿದರು.

ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಿ.ಮುನಿರಾಜು ಮಾತನಾಡಿ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲುವು ಕ್ಷೇತ್ರದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಹೊಸ ಶಕ್ತಿ ತಂದಿದೆ ಎಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮಾಡಿಕೊಂಡ ತಪ್ಪಿನಿಂದ 46 ಸಾವಿರ ಅಂತರದಿಂದ ಗೆದ್ದಿದ್ದ ಶಾಸಕರಿಗೆ ನಾವು ಮೈತ್ರಿ ಅಭ್ಯರ್ಥಿಗೆ 10 ಸಾವಿರ ಲೀಡ್ ಕೊಡುವ ಮೂಲಕ ತಿರುಗೇಟು ನೀಡಿದ್ದೇವೆ. ಮಳವಳ್ಳಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ 50 ಸಾವಿರ ಮತ ಲೀಡ್ ಕೊಡುತ್ತೇವೆ ಎನ್ನುತ್ತಿದ್ದರು. ಅದನ್ನು ಸುಳ್ಳಾಗಿದೆ ಎಂದರು.

ದೇಶದಲ್ಲಿ ಪ್ರಚಂಡ ಗೆಲುವಿನೊಂದಿಗೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದಿದ್ದು, ದೇಶಾದ್ಯಂತ ಜನರು ಸಂಭ್ರಮಿಸುತ್ತಿದ್ದಾರೆ. ರಾಜ್ಯ ಅಧಿಕಾರಕ್ಕೆ ನಡೆಸುತ್ತಿರುವ ಕಾಂಗ್ರೆಸ್ ನವರು 20 ಸ್ಥಾನ ಗೆಲುತ್ತೇವೆ ಎನ್ನುವ ಭ್ರಮೆ ಸುಳ್ಳಾಗಿ 9 ಸ್ಥಾನಕ್ಕೆ ತೃಪ್ತಿ ಪಟ್ಟಿಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಜನರು ನಮ್ಮನ್ನು ಬೆಂಬಲಿಸಿದ್ದಾರೆ ಎಂದರು.

ಈ ವೇಳೆ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಂ.ಎನ್.ಕೃಷ್ಣ, ಪುರಸಭೆ ಸದಸ್ಯರಾದ ರವಿ, ಪುಟ್ಟಸ್ವಾಮಿ, ಟೌನ್ ಅಧ್ಯಕ್ಷ ವೇಣು, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮೋಹನ್, ಮುಖಂಡರಾದ ಕೆ.ಸಿ.ನಾಗೇಗೌಡ, ಆನಂದ್, ದೇವರಾಜು, ಸುಂದ್ರಪ್ಪ ಇದ್ದರು.

Share this article