ಎಚ್‌.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಮೈತ್ರಿ ನಾಯಕರು

KannadaprabhaNewsNetwork |  
Published : Oct 19, 2025, 01:00 AM IST
18ಕೆಎಂಎನ್‌ಡಿ-21ಬೆಂಗಳೂರಿನ ಪದ್ಮನಾಭನಗರದ ಎಚ್‌.ಡಿ.ದೇವೇಗೌಡ ನಿವಾಸಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವಥನಾರಾಯಣ ಮತ್ತು ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌ ಇದ್ದರು. | Kannada Prabha

ಸಾರಾಂಶ

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಉಭಯ ಪಕ್ಷದ ನಾಯಕರು ದೇವೇಗೌಡರ ಆರೋಗ್ಯ ವಿಚಾರಿಸಿದರಲ್ಲದೆ ಜಿಲ್ಲಾ ರಾಜಕಾರಣದ ಕುರಿತು ಚರ್ಚಿಸಿದ್ದಾರೆ.

ಮಂಡ್ಯ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್‌ ನಾರಾಯಣ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶನಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಉಭಯ ಪಕ್ಷದ ನಾಯಕರು ದೇವೇಗೌಡರ ಆರೋಗ್ಯ ವಿಚಾರಿಸಿದರಲ್ಲದೆ ಜಿಲ್ಲಾ ರಾಜಕಾರಣದ ಕುರಿತು ಚರ್ಚಿಸಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿನ ರಾಜಕೀಯ ಬೆಳವಣಿಗೆ ಜತೆಗೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಆರ್‌ಎಸ್‌ಎಸ್ ಮೇಲಿನ ನಿಷೇಧ, ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ವಿಫಲವಾಗಿರುವುದು ಹಾಗೂ ಈ ಕುರಿತು ಹೋರಾಟ ನಡೆಸುವುದು ಸೇರಿದಂತೆ ಹಲವು ಮಹತ್ವದ ವಿಷಯದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ