51 ಹೊಸ ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರಿ ಮಾಡಿ

KannadaprabhaNewsNetwork |  
Published : Dec 20, 2023, 01:15 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ದೆಹಲಿಯಲ್ಲಿ ಭೇಟಿಯಾದರು. | Kannada Prabha

ಸಾರಾಂಶ

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್‌ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್‌ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಹೆಬ್ಬಾಳಕರ್ ಅವರು ಸ್ಮೃತಿ ಇರಾನಿ ಬಳಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.

ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಫ್‌ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋದಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಸಚಿವೆ ಹೆಬ್ಬಾಳಕರ್, ಕೂಡಲೇ ಅನುದಾನ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು.

ಜೊತೆಗೆ, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್‌ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್‌ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಹೆಬ್ಬಾಳಕರ್ ಅವರು ಸ್ಮೃತಿ ಇರಾನಿ ಬಳಿ ಮನವಿ ಮಾಡಿದರು.

ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ತಕ್ಷಣ ಎಲ್ಲವುಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ಸಂದರ್ಭದಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು