ಹುಬ್ಬಳ್ಳಿ:
ಆಶ್ರಯ ಯೋಜನೆಯ ನಿವೇಶನಗಳು ಬಡವರಿಗೆ ಸಿಗಬೇಕು. ಆದರೆ, ಅವರು ರಾಜಕೀಯ ಪ್ರಭಾವಿಗಳ ಪಾಲಾಗುತ್ತಿವೆ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬೆದರಿಕೆ ಹಾಕಲಾಗಿದೆ ಎಂದರು.
ನಿವೇಶನ ಹಂಚಿಕೆಯಲ್ಲಿ ಭಾರಿ ಪ್ರಮಾಣದ ಅವ್ಯಹಾರ ನಡೆದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನಿಜವಾದ ಫಲಾನುಭವಿಗಳಿಗೆ ನಿವೇಶನ ಸಿಗುವಂತೆ ಮಾಡಬೇಕು. ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.ಈ ವೇಳೆ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಉಪಾಧ್ಯಕ್ಷ ರಾಜು ತೇರದಾಳ, ನಾಗರಾಜ ಅಂಬಿಗೇರ, ವಿಶ್ವನಾಥ್ ಬೂದುರ, ಸಾಯಿನಾಥ ಕೊರವರ ಸೇರಿದಂತೆ ಹಲವರಿದ್ದರು.
ಶಾಸಕ ಅರವಿಂದ ಬೆಲ್ಲದ, ಪಾಲಿಕೆ ಉಪಮೇಯರ್ ಸತೀಶ ಹಾನಗಲ್ ಸೇರಿದಂತೆ ಮೂವರ ಮೇಲೆ ಇಲ್ಲಿನ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕರ ಕುಮ್ಮಕ್ಕಿನಿಂದ ತಮಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಪರಶುರಾಮ ದಾವಣಗೆರೆ ನೀಡಿದ ದೂರಿನನ್ವಯ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿರುವ ಹಕ್ಕುಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿ ಕುರಿತು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
2023 ಡಿ. 30ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಅಂದು ಪರಶುರಾಮ ದಾವಣಗೆರೆ ಅವರು, ಆನಂದನಗರದ ಕೃಷ್ಣಾ ಕಾಲನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂದು ದೂರಿ, ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯನ್ನು ಹಿಂಪಡೆಯುವಂತೆ ಉಪ ಮೇಯರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವರು ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಪರಶುರಾಮ ಅವರು 4ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು. ನ್ಯಾಯಾಲಯವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿ ಪ್ರಕರಣ ದಾಖಲಾಗಿದೆ.