ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಚಾಕನಕೆರೆ ಗ್ರಾಮದ ಕೆರೆಗೆ ಬಾಗೀನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ನಿರುದ್ಯೋಗ ಸಮಸ್ಯೆ ಗಮನಿಸಿದ್ದೇನೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರ್ಖಾನೆ ತರುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಯುವಕರು ಕೆಲಸ ಮಾಡಲು ರಾಜ್ಯದ ಹೊರಗೆ ಹೋದರೆ ಕೆಲಸ ತಕ್ಷಣವೇ ಕೊಡಿಸಬಹುದು. ಆದರೆ, ಯಾರೂ ಹೊರಗೆ ಹೋಗುತ್ತಿಲ್ಲ. ಅದಕ್ಕೆ ಸಮಯ ಕೇಳುತ್ತಿದ್ದೇನೆ. ಸಮಯ ಕೊಡಿ ನಿರುದ್ಯೋಗ ಸಮಸ್ಯೆ ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.ಗೆಜ್ಜಲಗೆರೆಯ ಸಾಯಿ ಗಾರ್ಮೆಂಟ್ಸ್ನವರೊಂದಿಗೆ ಮಾತುಕತೆ ನಡೆಸಿದ್ದೇನೆ. ಸುಮಾರು 5 ಸಾವಿರ ಎಕರೆ ಜಮೀನು ನೀಡಿದರೆ ನಾವು ಸಿದ್ಧ ಉಡುಪು ಕಾರ್ಖಾನೆ ಮಾಡಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಸ್ಥಳೀಯವಾಗಿ ಕಾರ್ಖಾನೆಗಳು ತೆರೆದಲ್ಲಿ ಸ್ಥಳೀಯ ನಿರುದ್ಯೋಗಿಗಳಿಗೆ ಕೆಲಸ ಸಿಗುತ್ತದೆ ಎಂದು ತಿಳಿಸಿದರು.
ನಮ್ಮ ರೈತರ ಶ್ರಮದ ಬಗ್ಗೆ ಗೊತ್ತಿದೆ. ನಮ್ಮ ತೋಟದಲ್ಲಿ ಎಲ್ಲ ರೀತಿಯ ಬೆಳೆಗಳನ್ನು ಬೆಳೆದಿದ್ದೇನೆ. ಕೈ ಜೋಡಿಸಿ ಮನವಿ ಮಾಡುತ್ತೇನೆ. ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕೇಂದ್ರದ ಮಂತ್ರಿ ಆಗುತ್ತೇನೆ ಎಂದು ನಾನು ಕನಸಲ್ಲೂ ಅಂದುಕೊಂಡಿರಲಿಲ್ಲ. ಜಿಲ್ಲೆಯ ಜನರು ಕೇಂದ್ರದಲ್ಲಿ ಕೃಷಿ ಸಚಿವರಾಗುತ್ತಾರೆ ಎಂಬ ಆಸೆ ಇಟ್ಟುಕೊಂಡಿದ್ದರು. ಆದರೆ, ಕೈಗಾರಿಕಾ ಸಚಿವ ಸ್ಥಾನ ಸಿಕ್ಕಿದೆ ಎಂದು ವಿವರಿಸಿದರು.
ಸಮಾರಂಭದಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ಗೌಡ, ಡಾ.ಕೆ.ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ಮನ್ಮುಲ್ ನಿರ್ದೇಶಕರಾದ ಬಿ.ಆರ್.ರಾಮಚಂದ್ರ, ಎಸ್.ಪಿ.ಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳೀಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್. ಗುರುಚರಣ್, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಮುಖಂಡರಾದ ಕೆ.ಟಿ. ರಾಜಣ್ಣ, ಕುಂದಲಕುಪ್ಪೆ ಕುಮಾರ್, ಜೆಡಿಸ್ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ರಾಮಚಂದ್ರಶೆಟ್ಟಿ ಸೇರಿದಂತೆ ಹಲವರು ಇದ್ದರು.