ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಅ. 29 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನ.28 ರ ವರೆಗೆ ಸರಿಪಡಿಸಿಕೊಳ್ಳಲು/ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ನ.9, 10, 23 ಮತ್ತು 24 ರಂದು ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ವಿಶೇಷ ಅಭಿಯಾನ ನಡೆಯಲಿದೆ ಎಂದು ವಿವರಿಸಿದರು.ಡಿ.24 ರಂದು ಮನವಿ/ ಆಕ್ಷೇಪಣೆಗಳ ಸರಿಪಡಿಸುವ ಕಾರ್ಯ ನಡೆಯಲಿದೆ. 2025 ರ ಜ.1 ರಂದು ಅಂತಿಮ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ನಡೆಯಲಿದೆ. 2025 ಜ.6 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಈ ಸಂಬಂಧ ತಮ್ಮ ತಮ್ಮ ಹಂತದಲ್ಲಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದರು.
ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 2 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳು ಒಟ್ಟು 6 ಮತಗಟ್ಟೆಗಳು ಹೆಚ್ಚಳವಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಗದ್ದೆಹಳ್ಳ, ಗುಮ್ಮನಕೊಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಡಗ ಬಾನಂಗಾಲ (ಹುಂಡಿ), ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಶಾಲಪ್ಪ ಮೆಮೋರಿಯಲ್ ಬಳಿಯ ಶಿಶು ವಿಹಾರ ಕೇಂದ್ರ, ಗೋಣಿಕೊಪ್ಪ ರಸ್ತೆ ಹಾಗೂ ಪಂಜರಪೇಟೆಯ ಉರ್ದುಶಾಲೆ ಇಲ್ಲಿ ಹೊಸ ಮತಗಟ್ಟೆಗಳು ಸ್ಥಾಪನೆ ಆಗಿದೆ ಎಂದು ವಿವರಿಸಿದರು.
ಕರಡು ಮತದಾರರ ಪಟ್ಟಿಯನ್ನು https://ceo.karnataka.gov.in ಮತ್ತು https://kodagu.nic.in website ನಲ್ಲಿಯೂ ಸಹ ಪರಿಶೀಲಿಸುವ ಮೂಲಕ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಮಹಿಳಾ ಮತದಾರರೇ ಅಧಿಕ:
ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 275 ಮತಗಟ್ಟೆಯಲ್ಲಿ 2,40,247 ಮತದಾರರು ಇದ್ದು, ಇದರಲ್ಲಿ 1,16,787 ಪುರುಷ ಮತದಾರರು, 1,23,452 ಮಹಿಳಾ ಮತದಾರರು ಮತ್ತು 8 ಇತರ ಮತದಾರರು ಇದ್ದಾರೆ.
ಅ.29 ರಿಂದ ನ.28 ರವರೆಗೆ 2025 ರ ಜ.1, 2025 ರ ಏ.1, 2025 ರ ಜು.1 ಮತ್ತು 2025 ರ ಅ.1 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ತಿದ್ದುಪಡಿ, ವರ್ಗಾವಣೆ ಅವಕಾಶ:
ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರತಿನಿಧಿ ತೆನ್ನಿರಾ ಮೈನಾ ಮಾತನಾಡಿ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಪ್ರತೀ ಬೂತ್ಗಳಿಗೆ ಬಿಎಲ್ಎ(ಬೂತ್ ಮಟ್ಟದ ಏಜೆಂಟ್) ಗಳನ್ನು ನಿಯೋಜಿಸಲಾಗಿದ್ದು, ಅವರನ್ನು ಬೂತ್ ಮಟ್ಟದ ಅಧಿಕಾರಿಗಳ ಜೊತೆ ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ಪ್ರಮುಖ ಸಜಿಲ್ ಕೃಷ್ಣ, ಬಹುಜನ ಸಮಾಜ ಪಕ್ಷದ ಕವಿತಾ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಹಲವು ಮಾಹಿತಿ ನೀಡಿದರು. ಚುನಾವಣಾ ಶಿರಸ್ತೇದಾರ್ ಕೆ.ಜಿ.ಮಧುಕರ, ಅನಿಲ್ ಕುಮಾರ್ ಇದ್ದರು.