ಕನ್ನಡಪ್ರಭ ವಾರ್ತೆ ಮಂಗಳೂರು
ಸುಮಾರು 40 ವರ್ಷಗಳ ಹಿಂದೆ ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನಿಂದ ಅಳಿಯನೊಂದಿಗೆ ಮಳಗಿಯಿಂದ ಇವರು ಮಂಗಳೂರಿಗೆ ಬಂದಿದ್ದರು. ಬಾವುಟಗುಡ್ಡೆಯ ಅಲೋಶಿಯಸ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸಮೋಸ ಮಾರಲು ಆರಂಭಿಸಿದ್ದರು. ನಗುಮುಖದೊಂದಿಗೆ ಬಿಸಿ ಬಿಸಿ ಸಮೋಸ ಕೊಡುತ್ತಿದ್ದ ಕಾರಣಕ್ಕೆ ಬಹುಬೇಗನೆ ವಿದ್ಯಾರ್ಥಿಗಳನ್ನು ಆಕರ್ಷಿಸಿದ್ದರು. ದಿನವೂ ಮಧ್ಯಾಹ್ನ, ಸಂಜೆ ಅಲೋಶಿಯಸ್ ಕಾಲೇಜು ಆವರಣದಲ್ಲಿ ತಿಂಡಿಗಳನ್ನು ಮಾರುತ್ತಿದ್ದರಿಂದ ಮಕ್ಕಳಿಗೆ ನೆಚ್ಚಿನ ತಾತನೂ ಆಗಿದ್ದರು.
ಮಲ್ಲಿಕಾರ್ಜುನ ಅವರು ಪತ್ನಿಯೊಂದಿಗೆ ಮಂಗಳೂರಿನ ಕಾವೂರಿನಲ್ಲಿ ನೆಲೆಸಿದ್ದರು. ಇವರಿಗೆ ನಾಲ್ವರು ಮಕ್ಕಳಿದ್ದು, ಎಲ್ಲರೂ ಉದ್ಯೋಗದಲ್ಲಿದ್ದಾರೆ. ಆದರೂ ಇವರು ಮಾತ್ರ ವಯಸ್ಸಾದರೂ ವೃತ್ತಿಗೆ ನಿವೃತ್ತಿ ಕೊಡದೆ ನಿತ್ಯವೂ ತನ್ನ ಕಾಯಕ ನಡೆಸುತ್ತಿದ್ದರು.