ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಎನ್ಡಿಎ ಕೇವಲ ಉದ್ಯೋಗವಲ್ಲ. ಅದು ದೇಶ ಸೇವೆಯ ಕನಸು ಹಾಗೂ ಪ್ರತಿಷ್ಠೆಯ ಕಾಯಕ. ಎನ್ಡಿಎ ಪರೀಕ್ಷೆಗಳು ವರ್ಷಕ್ಕೆ ಎರಡು ಭಾರಿ ನಡೆಯುತ್ತಿದ್ದು, ಕುಬ್ಜ ವ್ಯಕ್ತಿಗಳು ಪರೀಕ್ಷೆ ಎದುರಿಸಬಹುದು ಎಂದು ತಿಳಿಸಿದರು. ನಮ್ಮ ಭವಿಷ್ಯದ ಬಗ್ಗೆ ಬೇರೆಯವರು ನಿರ್ಧಾರ ತೆಗೆದುಕೊಳ್ಳಲು ಬದಲು ನಾವೇ ನಮ್ಮ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಪಿಯು ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್ ಮಾತನಾಡಿ ನಿರ್ಧಿಷ್ಟ ಸಮಯದಲ್ಲಿ ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳುವುದರಿಂದ ಜೀವನದಲ್ಲಿ ಗರಿಷ್ಠ ಲಾಭವನ್ನು ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಗುರಿಯ ಕಡೆ ಗಮನಹರಿಸಿ ಇಂದಿನಿಂದಲೇ ಕಾರ್ಯವನ್ನು ಆರಂಭಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.ಎನ್ಡಿಎ ಪರೀಕ್ಷೆಗಳ ಸಂಯೋಜಕ ದೇವಿಪ್ರಸಾದ್ ಮಾತನಾಡಿ, ಒಂದು ದಿನದ ಪ್ರವಾಸಕ್ಕೆ ಯೋಜನೆ ರೂಪಿಸುವ ಆಸಕ್ತಿಯನ್ನು, ನಮ್ಮ ಒಂದು ವರ್ಷದ ಶಿಕ್ಷಣಕ್ಕೆ ತೋರಿಸಿದರೆ ಅಂದುಕೊಂಡ ಹಾಗೆ ಗೆಲುವು ಸಾಧಿಸಲು ಸಾಧ್ಯ ಎಂದರು.ಸಂಯೋಜಕ ವರುಣ್ ಪ್ರಭು ಇದ್ದರು. ಇಂಗ್ಲೀಷ್ ಉಪನ್ಯಾಸಕಿ ದೀಪಾ ಶೆಟ್ಟಿ ನಿರೂಪಿಸಿದರು.