ಕನ್ನಡಪ್ರಭ ವಾರ್ತೆ ಮಂಗಳೂರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪ್ರಗತಿ 15ನೇ ಆವೃತ್ತಿಯನ್ನು ಆ.1ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಮಂಗಳೂರು ವಿವಿ ಕುಲಪತಿ ಡಾ.ಪಿ.ಎಲ್. ಧರ್ಮ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುತ್ತಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅಲ್ಕಾರ್ಗೋ ಲಾಜಿಸ್ಟಿಕ್ಸ್ ಅಧ್ಯಕ್ಷ ಶಶಿಕಿರಣ್ ಶೆಟ್ಟಿ, ದುಬೈನ ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ, ಸೌದಿ ಅರೇಬಿಯಾ ಎಕ್ಸಪರ್ಟಟೈಸ್ ಕಂಪೆನಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆಎಸ್ ಶೇಖ್ ಕರ್ನಿರೆ, ಬಿಗ್ ಬ್ಯಾಗ್ಸ್ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ನ ಸ್ಥಾಪಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಶ್ ಕಾಮತ್, ರೋಹನ್ ಕಾರ್ಪೊರೇಶನ್ ಸ್ಥಾಪಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರೋಹನ್ ಮೊಂತೇರೊ, ನೀವಿಯಸ್ ಸೊಲ್ಯೂಷನ್ಸ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಯೋಗ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದರು.ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಇಎಸ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟ್ಯಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಈ ಉದ್ಯೋಗ ಮೇಳದಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್ಮೆಂಟ್, ಬೇಸಿಕ್ ಸೈನ್ಸ್, ನಸಿಂರ್ಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಇತರ ವಿದ್ಯಾರ್ಹತೆಯುಳ್ಳ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಯಾವುದೇ ಕೋರ್ಸ್ಗಳನ್ನು 2025ರ ಶೈಕ್ಷಣಿಕ ವರ್ಷದ ಮೊದಲು ಪೂರ್ಣಗೊಳಿಸಿದವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದರು.
ಈಗಾಗಲೇ 285 ಕಂಪೆನಿಗಳು ನೋಂದಾಯಿಸಿಕೊಂಡಿವೆ. 15,930ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಇರಲಿವೆ. ಮ್ಯಾನುಫ್ಯಾಕ್ಚರಿಂಗ್ ವಲಯದಲ್ಲಿ 70 ಕಂಪೆನಿಗಳು ಭಾಗವಹಿಸುತ್ತಿವೆ. 22 ಕಂಪೆನಿಗಳು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಅಭ್ಯರ್ಥಿಗಳಿಗೆ ಸುಮಾರು 200 ಉದ್ಯೋಗಾವಕಾಶ ನೀಡಲಿವೆ. 20 ಕಂಪೆನಿಗಳು ಬಿಕಾಂ ಪದವೀಧರರಿಗೆ ಸುಮಾರು 150 ಉದ್ಯೋಗಾವಕಾಶ ನೀಡಲಿವೆ. ಟಾಟಾ ಇಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಸೊಲ್ಯುಶನ್ಸ್ ಪ್ರೈವೇಟ್ ಲಿಮಿಟೆಡ್ (ಕೋಲಾರ್) ಕಂಪೆನಿ ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಐಟಿಐ ಅಭ್ಯರ್ಥಿಗಳಿಗೆ 1,000 ಉದ್ಯೋಗಾವಕಾಶಗಳು, ಡಿಪ್ಲೊಮಾ ಅಭ್ಯರ್ಥಿಗಳಿಗೆ 1,500 ಉದ್ಯೋಗಾವಕಾಶಗಳು ಲಭ್ಯವಿವೆ ಎಂದು ವಿವೇಕ್ ಆಳ್ವ ತಿಳಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತರಬೇತಿ ಮತ್ತು ನಿಯೋಜನೆ ವಿಭಾಗ ಮುಖ್ಯಸ್ಥೆ ರಂಜಿತಾ ಆಚಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಅಮಿತ್ ಶೆಟ್ಟಿ ಇದ್ದರು.
ನೋಂದಣಿ ಮಾಡಿ