ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಉಡುಪಿ ಶ್ರೀ ಅದಮಾರು ಮಠದ ಶಿಕ್ಷಣ ಸಮೂಹಗಳ ಉಪ ಆಡಳಿತಾಧಿಕಾರಿ ಪುಂಡರಿಕಾಕ್ಷ ಕೊಡಂಚ ಮಾತನಾಡಿ, ಕಾವ್ಯವು ನಮ್ಮ ಸಂಸ್ಕೃತಿಯ ಮಹತ್ವಪೂರ್ಣ ಅಂಗ. ಆ ಮೂಲಕ ನಮ್ಮ ಭಾವನೆ ಹಾಗೂ ಅನುಭವಗಳನ್ನು ವ್ಯಕ್ತಪಡಿಸಲು ಸಹಕಾರಿಯಾಗಿದೆ. ಕಾವ್ಯ ದಿನ ಆಚರಿಸುವುದರ ಮೂಲಕ ಮಹಾನ್ ಕವಿಗಳ ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಹೊಸ ಬರಹಗಾರರಿಗೆ ಪ್ರೇರಣೆಯಾಗಲು ಸಹಾಯ ಮಾಡುತ್ತದೆ ಎಂದರು.
ತಾರ್ಕಿಕವಾಗಿ ಯೋಚಿಸಿ ಮತ್ತು ಸಾಮಾನ್ಯ ಜ್ಞಾನವನ್ನು ಬಳಸಿದರೆ ಯಾರೂ ಬದುಕಿನಲ್ಲಿ ಪ್ರಮಾದವನ್ನೆಸಗಲಾರರು. ತಾರ್ಕಿಕ ಯೋಚನೆಯುಳ್ಳ ವ್ಯಕ್ತಿಗೆ ಅವಕಾಶಗಳು ವಿಫುಲವಾಗಿರುತ್ತವೆ ಎಂದರು. ಸುಂದರವಾದ ಭೂಮಿಯನ್ನು ಉಳಿಸಬೇಕು. ಅದು ನಮ್ಮ ಆಸೆಗಳನ್ನು ಪೂರೈಸ ಬಲ್ಲದೇ ಹೊರತು, ನಮ್ಮ ದುರಾಸೆಯನ್ನಲ್ಲ ಎಂದರು.ನಂತರ ಗ್ಲಿಸನ್ ಸಂಘದ ವತಿಯಿಂದ ಆಯೋಜಿಸಲಾದ ಕಾವ್ಯ ವಾಚನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಿಎಸ್ಸಿಯ ಮೇಘಾ ಡಿವಿ ಪ್ರಥಮ ಸ್ಥಾನ ಪಡೆದರೆ, ಎಫ್ಎನ್ಡಿಯ ಪ್ರೇರಣಾ ಜೈನ್ ದ್ವಿತೀಯ, ಬಿಎಯ ಸಮೀಕ್ಷಾ ರಾವ್ ತೃತೀಯ ಸ್ಥಾನ ಪಡೆದರು.
ಶ್ರಾವ್ಯ ಶೆಟ್ಟಿ ಸ್ವಾಗತಿಸಿದರು. ದಿಶಾ ಕೋಟ್ಯಾನ್ ವಂದಿಸಿದರು. ಸಮೀಕ್ಷಾ ರಾವ್ ಕಾರ್ಯಕ್ರಮ ನಿರೂಪಿಸಿದರು.