ಕೊಡಗಿನ ಸಂಸ್ಕೃತಿ ಪೋಷಿಸಿ ಬೆಳೆಸಲು ಸದಾ ಸಿದ್ಧ: ಎ.ಎಸ್.ಪೊನ್ನಣ್ಣ

KannadaprabhaNewsNetwork |  
Published : Jun 25, 2025, 01:18 AM IST
ಕೊಳಕೇರಿ  ಗ್ರಾಮದ ಕುಂಡ್ಯೋಳಂಡ ಐನ್ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ  ಹಾಗೂ ಕುಂಡ್ಯೋಳಂಡಕುಟುಂಬಸ್ಥರು, ಬಂಧು ಮಿತ್ರರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಕೊಡಗಿನ ಸಂಸ್ಕೃತಿ, ಕ್ರೀಡೆ ಹಾಗೂ ಇತಿಹಾಸವನ್ನು ಪೋಷಿಸಿ ಬೆಳೆಸಲು ಸದಾ ಸಿದ್ಧ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕೊಡಗಿನ ಸಂಸ್ಕೃತಿ, ಕ್ರೀಡೆ ಹಾಗೂ ಇತಿಹಾಸವನ್ನು ಪೋಷಿಸಿ ಬೆಳೆಸಲು ಸದಾ ಸಿದ್ಧ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಮನೆಯ ಮುಖ್ಯಸ್ಥರ ಕೋರಿಕೆ ಮೇರೆಗೆ ಶನಿವಾರ ಸಂಜೆ ಕುಂಡ್ಯೋಳಂಡ ಐನ್ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು ಕುಟುಂಬಸ್ಥರ ಆತಿಥ್ಯ ಸ್ವೀಕರಿಸಿ ಮಾತನಾಡಿದರು.

ಕೊಡವ ಜನಾಂಗದ ಆಚಾರ, ವಿಚಾರ, ಸಂಸ್ಕೃತಿ ವಿಭಿನ್ನವಾಗಿದೆ. ಅದರೊಂದಿಗೆ ಹಾಕಿ ಕ್ರೀಡೆಯು ಮಹತ್ವವನ್ನು ಹೊಂದಿದೆ. ಮುಂದಿನ ಸಾಲಿನಲ್ಲಿ ನಡೆಯುವ ಹಾಕಿ ಉತ್ಸವದ ಯಶಸ್ವಿಗೆ ಸಕಲ ಸಹಕಾರ ನೀಡುವುದಾಗಿ ತಿಳಿಸಿದರು.

2024ರಲ್ಲಿ ಜರುಗಿದ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆ ಅಭೂತಪೂರ್ವ ಯಶಸ್ಸು ಕಂಡಿತ್ತು. ಈ ಯಶಸ್ಸಿನ ಹಿಂದೆ ಶಾಸಕ ಪೊನ್ನಣ್ಣ ಅವರ ಕೊಡುಗೆ ಬಹು ದೊಡ್ಡದು. ಕುಂಡ್ಯೋಳಂಡ ಕುಟುಂಬಸ್ಥರ ಕೋರಿಕೆ ಮೇರೆಗೆ ಶಾಸಕರು ಈ ಹಾಕಿ ಪಂದ್ಯಾಟಕ್ಕೆ ವಿಶೇಷ ಅನುದಾನ ಒದಗಿಸುವಲ್ಲಿ ಶ್ರಮಿಸಿದರು. ಶಾಸಕರ ಈ ಪ್ರಯತ್ನಕ್ಕೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಲು ಕುಂಡ್ಯೋಳಂಡ ಕುಟುಂಬಸ್ಥರು ಈ ವಿಶೇಷ ಔತಣ ಕೂಟವನ್ನು ಆಯೋಜಿಸಿ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿದರು.

ಈ ಸಂದರ್ಭ ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ, ಬೊಟ್ಟಕಾಳಂಡ ಮುತ್ತಣ್ಣ, ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಚುಬ್ಬಣಿ ಸುಬ್ಬಯ್ಯ, ಲಲಿತಾ ಚಿಣ್ಣಪ್ಪ, ರಮೇಶ್ ಮುದ್ದಯ್ಯ, ದಿನೇಶ್ ಕಾರ್ಯಪ್ಪ, ಕುಟುಂಬಸ್ಥರು ಹಾಗೂ ಬಂಧು ಮಿತ್ರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!