ಮಹಿಳೆಯರನ್ನು ಸಶಕ್ತರನ್ನಾಗಿಸಲು ಸದಾ ಪ್ರಯತ್ನ: ಬಸವರಾಜ ಜನ್ಮಟ್ಟಿ

KannadaprabhaNewsNetwork |  
Published : Jul 23, 2024, 12:40 AM IST
22ಬಿಎಲ್‌ಎಚ್‌3 | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜದಲ್ಲಿ ಮಹಿಳೆಯರನ್ನು ಸಶಕ್ತರನ್ನಾಗಿ ರೂಪಿಸಿ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸಹಾಯದೊಂದಿಗೆ ಮುಖ್ಯವಾಹಿನಿಗೆ ಬರುವಲ್ಲಿ ಸದಾ ಪ್ರಯತ್ನಿಸುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜದಲ್ಲಿ ಮಹಿಳೆಯರನ್ನು ಸಶಕ್ತರನ್ನಾಗಿ ರೂಪಿಸಿ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸಹಾಯದೊಂದಿಗೆ ಮುಖ್ಯವಾಹಿನಿಗೆ ಬರುವಲ್ಲಿ ಸದಾ ಪ್ರಯತ್ನಿಸುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಹೇಳಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಮುರಗೋಡ ರಸ್ತೆಯ ಬಸವ ನಗರದ ರಾಣಿ ಚನ್ನಮ್ಮ ಜ್ಞಾನ ವಿಕಾಸ ಕೇಂದ್ರದಲ್ಲಿ ಶನಿವಾರ ಜರುಗಿದ ಪೌಷ್ಟಿಕ ಆಹಾರ ಸಿರಿಧಾನ್ಯ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯಯುತ ಜೀವನ ನಡೆಸಬೇಕಾದರೆ ಸಿರಿಧಾನ್ಯದ ಆಹಾರ ಸೇವಿಸಿ ಧೀರ್ಘಾಯುಶಿಗಳಾಗಿ ಬದುಕಲು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ.ಕಿರಣ ಮೂಡಲಗಿ ಪೌಷ್ಟಿಕ ಆಹಾರದ ಉಪಯೋಗ, ಕ್ರಮಗಳ ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಮಹಿಳೆಯರಿಗೆ ಉಪನ್ಯಾಸ ನೀಡಿದರು.

ಕೇಂದ್ರದ ಅಧ್ಯಕ್ಷ್ಯೆ ಅಕ್ಕಮಹಾದೇವಿ ಕುಂಬಾರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಕಜಾಪ ವಕ್ತಾರ ಮಹಾಂತೇಶ ರಾಜಗೋಳಿ, ಕೃಷಿ ಅಧಿಕಾರಿ ರುದ್ರಪ್ಪ ಕುಂಬಾರ, ವಲಯ ಮೇಲ್ವಚಾರಕ ರವಿಕುಮಾರ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೈಲಾ ಜಕ್ಕನ್ನವರ, ಆಗಮಿಸಿದ್ದರು. ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಿರಿಧಾನ್ಯದ ಪೌಷ್ಟಿಕ ಆಹಾರ ತಯಾರಿಸಿದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಸೇವಾ ಪ್ರತಿನಿಧಿ ನಿರ್ಮಲ ಎಸ್ ಸ್ವಾಗತಿಸಿ, ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ