ಅಮರಶಿಲ್ಪಿ ಜಕಣಾಚಾರಿ ಶಿಲೆಗಳ ಕೆತ್ತೆನೆಯು ಕಲಾ ನೈಪುಣ್ಯತೆಗೆ ಕನ್ನಡಿ

KannadaprabhaNewsNetwork |  
Published : Dec 29, 2023, 01:31 AM IST
ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್‌ ಕಲಗೌಡ ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಕಾರ್ಯಕ್ರಮದಲ್ಲಿ ಜಕಣಾಚಾರಿ ಅವರ ಕುರಿತು ಉಪನ್ಯಾಸ ನೀಡಲಾಗುವುದು. ವಿಶೇಷ ಸಾಧನೆಗೈದ ಶಿಲ್ಪಿಗಳಿಗೆ ಸನ್ಮಾನಿಸಲಾಗುವುದು

ಹುಬ್ಬಳ್ಳಿ: ನಾಡಿಗೆ ಅಮರಶಿಲ್ಪಿ ವಿಶ್ವಕರ್ಮ ಜಕಣಾಚಾರಿ ಕೊಡುಗೆ ಅಪಾರವಾಗಿದೆ ಎಂದು ತಹಸೀಲ್ದಾರ್‌ ಕಲಗೌಡ ಪಾಟೀಲ ಹೇಳಿದರು.

ಮಂಗಳವಾರ ಇಲ್ಲಿನ ತಾಲೂಕು ಆಡಳಿತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜಕಣಾಚಾರಿ ನಿರ್ಮಿಸಿರುವ ಐತಿಹಾಸಿಕ ದೇವಾಲಯಗಳ ಮೇಲಿನ ಸುಂದರ ಕೆತ್ತನೆಗಳು ಅವರ ಕಲಾ ನೈಪುಣ್ಯತೆಗೆ ಕನ್ನಡಿಯಾಗಿದೆ. ಇಂದಿನ ಯುವ ಪೀಳಿಗೆಯು ಅವರ ಹಿನ್ನೆಲೆಯನ್ನು ಅರಿಯುವುದು ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಭವನದಲ್ಲಿ ಜ.1ರಂದು ಬೆಳಗ್ಗೆ 11ಗಂಟೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತಿದ್ದು, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಗುವುದು. ಕಾರ್ಯಕ್ರಮದಲ್ಲಿ ಜಕಣಾಚಾರಿ ಅವರ ಕುರಿತು ಉಪನ್ಯಾಸ ನೀಡಲಾಗುವುದು. ವಿಶೇಷ ಸಾಧನೆಗೈದ ಶಿಲ್ಪಿಗಳಿಗೆ ಸನ್ಮಾನಿಸಲಾಗುವುದು ಎಂದರು.

ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಪ್ರಕಾಶ ನಾಶಿ ಕಾರ್ಯಕ್ರಮದ ರೂಪರೇಷಗಳ ಬಗ್ಗೆ ವಿವರಿಸಿದರು. ಸಮುದಾಯದ ಮುಖಂಡರಾದ ಎಸ್.ಎಂ. ಕಮ್ಮಾರ, ಮೌನೇಶ ಬಡಿಗೇರ, ವಿನೋದ ಬಡಿಗೇರ, ಸುರೇಶ ದ್ಯಾಮಣ್ಣವರ, ರವಿಕುಮಾರ ಕಮ್ಮಾರ, ರಾಜು ಆಲೂರು ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ