ಮಲ್ಲಯ್ಯ ಪೋಲಂಪಲ್ಲಿ
ಎಳ್ಳ ಅಮಾವಾಸ್ಯೆ ಹಬ್ಬ ರೈತರ ಹಬ್ಬವಾಗಿದ್ದು, ಜಾತಿ, ಮತ ಭೇದವಿಲ್ಲ. ಒಕ್ಕಲುತನ ಅವಲಂಬಿಸಿರುವ ಮುಸ್ಲಿಂ ಕುಟುಂಬಗಳೂ ಎಳ್ಳು ಅಮಾವಾಸ್ಯೆಯೆಂದು ಹೊಲಕ್ಕೆ ಹೋಗಿ ಚೆರಗ ಚೆಲ್ಲುವುದು ಈ ಭಾಗದಲ್ಲಿ ತನ್ನದೇ ಆದ ವೈಶಿಷ್ಟ್ಯ ಹೊಂದಿದೆ.
ರೈತ ಮಹಿಳೆಯರು ಬಗೆ ಬಗೆಯ ಖಾದ್ಯ ಮಾಡಿಕೊಂಡು ಭೂತಾಯಿಗೆ ಪೂಜಿಸಿ, ಸಹಭೋಜನ ಮಾಡಿ ಸಂಭ್ರಮಿಸುತ್ತಾರೆ.ಎಳ್ಳು ಅಮಾವಾಸ್ಯೆ ದಿನ ರೈತರು, ರೈತ ಮಹಿಳೆಯರು ಹಾಗೂ ಮಕ್ಕಳು ಸೇರಿ ಮನೆ ಮಂದಿ ಚಕ್ಕಡಿ, ಟ್ರ್ಯಾಕ್ಟರ್ನಲ್ಲಿ ಬುತ್ತಿ ಕಟ್ಟಿಕೊಂಡು ಹೊಲಕ್ಕೆ ಹೋಗುತ್ತಾರೆ. ಎಳ್ಳು ಹಚ್ಚಿದ ಸಜ್ಜೆರೊಟ್ಟಿ, ಬರ್ತಾ, ಎಳ್ಳು ಕಡುಬು, ಕರಿಗಡಬು, ಎಣ್ಣೆ ಬದನೆಕಾಯಿ ಪಲ್ಲೆ, ಹಪ್ಪಳ, ಸೆಂಡಿಗೆ ವಿವಿಧ ಖಾದ್ಯಗಳನ್ನು ತಯಾರಿಸಿ ಕಟ್ಟಿಕೊಂಡು ಹೊಲಕ್ಕೆ ಹೋಗಿ, ಬೆಳೆದು ನಿಂತಿರೋ ಜೋಳ, ಕಡಲೆ ಸೇರಿ ಹಿಂಗಾರು ಬೆಳೆಯಲ್ಲಿ 5 ಕಲ್ಲಿನಿಂದ ಪಾಂಡವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ‘ಹುಲ್ಲು ಹುಲ್ಲಿಗೋ ಚೆಲ್ಲ ಚೆಲ್ಲಂಬರಿಗೋ’ ಎಂದು ಹೇಳುತ್ತಾ ಹೊಲದಲ್ಲಿನ ಬೆಳೆಗಳಿಗೆ ಚರಗ ಚೆಲ್ಲುತ್ತಾರೆ. ಬಳಿಕ ಹೊಲದಲ್ಲಿ ಎಲ್ಲರೂ ಸೇರಿ ಸಹಭೋಜನ ಮಾಡುತ್ತಾರೆ.
ಎಳ್ಳ ಅಮಾವಾಸ್ಯೆ ಮೂರು, ನಾಲ್ಕು ದಿನವಿರುವಾಗಲೇ ರೈತರ ಮನೆಗಳಲ್ಲಿ ಸಂಭ್ರಮ ಶುರುವಾಗುತ್ತದೆ. ಎಳ್ಳು ಹಾಗೂ ಶೇಂಗಾ ಹೋಳಿಗೆ, ಎಳ್ಳು ಹಚ್ಚಿದ ಸಜ್ಜೆ, ಜೋಳದ ರೊಟ್ಟಿ, ಚಟ್ನಿ, ಕಾಳು, ಎಣ್ಣೆಗಾಯಿ, ಚಿಕ್ಕಿ, ಬರ್ತಾ, (ಹಸಿ ಉಳ್ಳಾಗಡ್ಡಿ ತಪ್ಪಲ, ಪಾಲಕ್ ಮೆಂತ್ಯೆ, ಉಪಯೋಗಿಸಿ ತಯಾರಿಸುವ ಪಲ್ಲೆ), ಮೆಂತೆ ಕಡಬು, ಭಜ್ಜಿ ಸೇರಿದಂತೆ ನಾನಾ ಬಗೆಯ ಖಾದ್ಯವನ್ನು ತಯಾರಿಸಿ ನಂತರ ರೈತಾಪಿ ವರ್ಗದವರು ಕುಟುಂಬ ಸಮೇತರಾಗಿ ತಮ್ಮ ಹೊಲಗಳಿಗೆ ಹೋಗಿ ಚರಗ ಚೆಲ್ಲಿ ಪೂಜೆ ಮಾಡಿದ ನಂತರ ಬಂಧು-ಮಿತ್ರರ ಸಮೇತ ಸಹಭೋಜನ ಸವಿದು ಸಂಭ್ರಮಿಸುತ್ತಾರೆ.
- ಬಸಪ್ಪ ಪೂಜಾರಿ, ದೋರನಹಳ್ಳಿ ಗ್ರಾಮದ ರೈತ.ಎಳ್ಳು ಹಾಗೂ ಶೇಂಗಾ ಹೋಳಿಗೆ, ಎಳ್ಳು ಹಚ್ಚಿದ ಸಜ್ಜೆ, ಜೋಳದ ರೊಟ್ಟಿ, ಚಟ್ನಿ, ಕಾಳು, ಎಣ್ಣೆಗಾಯಿ, ಚಿಕ್ಕಿ, ಬರ್ತಾ, (ಹಸಿ ಉಳ್ಳಾಗಡ್ಡಿ ತಪ್ಪಲ, ಪಾಲಕ್ ಮೆಂತ್ಯೆ, ಉಪಯೋಗಿಸಿ ತಯಾರಿಸುವ ಪಲ್ಲೆ), ಮೆಂತೆ ಕಡಬು, ಭಜ್ಜಿ ಹಬ್ಬದ ದಿನ ಮಡಿಯಲ್ಲಿ ಅಡಿಗೆ ಮಾಡಿಕೊಂಡು ಹೊಲಕ್ಕೆ ಹೋಗಿ ಚರಗ ಚೆಲ್ಲುವ ಸಂಪ್ರದಾಯ ನಮ್ಮ ಹಿರಿಯರಿಂದಲೂ ಮಾಡಿಕೊಂಡು ಬರುತ್ತಿದ್ದೇವೆ.