ಅಂಬರೀಶ್ ವಿರುದ್ಧ ಲಘುವಾಗಿ ಮಾತನಾಡಿಲ್ಲ: ಎಲ್‌ಆರ್‌ಎಸ್

KannadaprabhaNewsNetwork |  
Published : Jan 30, 2026, 01:30 AM IST
ಎಲ್‌.ಆರ್‌.ಶಿವರಾಮೇಗೌಡ | Kannada Prabha

ಸಾರಾಂಶ

ಆತನೊಂದಿಗೆ ೨.೪೨ ನಿಮಿಷ ಅಷ್ಟೇ ಮಾತನಾಡಿದ್ದೆ. ಆದರೆ ಎಐ ತಂತ್ರಜ್ಞಾನ ಬಳಸಿ ಇಲ್ಲ ಸಲ್ಲದ ಮಾತುಕತೆ ನಡೆದಿದೆ ಎಂದು ೨೦ ನಿಮಿಷಗಳ ಆಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ನನ್ನ ತೇಜೋವಧೆಗೆ ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ನಾಗಮಂಗಲ ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿದ್ದೆ ಎನ್ನಲಾದ ಆಡಿಯೋದಲ್ಲಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧವಾಗಲೀ, ಡಿ.ಕೆ.ಶಿವಕುಮಾರ್, ಅಂಬರೀಶ್, ಜಿ.ಮಾದೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದೇನೆಂಬುದು ಸುಳ್ಳು ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂದ ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ರಾಜಕೀಯವಾಗಿ ಸುದ್ಧಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದೆ. ಅವರು ಡಿ.ಕೆ.ಶಿವಕುಮಾರ್ ಅವರನ್ನು ತೇಜೋವಧೆ ಮಾಡುವಂತೆ ಮಾತನಾಡಿದ್ದಕ್ಕೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದ್ದೆ. ಆದರೆ ಕದಬಳ್ಳಿಯ ರಂಗ ಎಂಬಾತ ನನ್ನ ಪಿಎ ನಂಬರ್‌ಗೆ ಕಾಲ್ ಮಾಡಿ ಗೌಡರ ಜೊತೆ ಮಾತನಾಡಬೇಕೆಂದು ಮನವಿ ಮಾಡಿದ್ದ. ಕುಮಾರಸ್ವಾಮಿ ಬಗ್ಗೆ ಮಾತನಾಡಿರುವುದರ ಬಗ್ಗೆ ಆಕ್ಷೇಪಿಸಿ, ನನ್ನನ್ನು ಪ್ರಚೋಧಿಸಲು ಪ್ರಯತ್ನಿಸಿದ್ದ. ಆತನ ವರ್ತನೆ ಗಮನಿಸಿ ನಾನು ಒಂದೆರಡು ಮಾತು ಬೈದು ಫೋನ್ ಇಟ್ಟಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆತನೊಂದಿಗೆ ೨.೪೨ ನಿಮಿಷ ಅಷ್ಟೇ ಮಾತನಾಡಿದ್ದೆ. ಆದರೆ ಎಐ ತಂತ್ರಜ್ಞಾನ ಬಳಸಿ ಇಲ್ಲ ಸಲ್ಲದ ಮಾತುಕತೆ ನಡೆದಿದೆ ಎಂದು ೨೦ ನಿಮಿಷಗಳ ಆಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ನನ್ನ ತೇಜೋವಧೆಗೆ ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಾನು ಯಾವ ನಾಯಕರ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ. ಇದೊಂದು ಸೃಷ್ಟಿ ಮಾಡಿರುವುದೇ ಹೊರತು ಸತ್ಯವಾದುದಲ್ಲ. ಈ ಬಗ್ಗೆ ನನ್ನ ಕಾನೂನು ಸಲಹಾ ತಂಡದ ಜೊತೆ ಚರ್ಚಿಸಿ ಸೈಬರ್ ಠಾಣೆಗೆ ದೂರು ನೀಡಿ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನನ್ನ ಹೇಳಿಕೆಯಲ್ಲದಿದ್ದರೂ ಈ ಬೆಳವಣಿಗೆಯಿಂದ ಅಂಬರೀಶ್ ಅಭಿಮಾನಿಗಳಿಗೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ