ಗಣೇಶ ಅಮೀನಗಡರ ‘ರಂಗ ಪ್ರಸಂಗ’ಕ್ಕೆ ‘ಅಂಬಾತನಯ ಮುದ್ರಾಡಿ ಪ್ರಶಸ್ತಿ’

KannadaprabhaNewsNetwork |  
Published : Aug 12, 2026, 03:15 AM IST
10ಗಣೇಶ | Kannada Prabha

ಸಾರಾಂಶ

ಲೇಖಕ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ಅಂಬಾತನಯ ಮುದ್ರಾಡಿ ಅವರ ಸಂಸ್ಮರಣೆಯಲ್ಲಿ ಉಡುಪಿ ರಂಗಭೂಮಿಯು ನೀಡುವ ವಾರ್ಷಿಕ ಪುಸ್ತಕ ಪ್ರಶಸ್ತಿಯ ಮೂರನೇ ವರ್ಷದ ಪುರಸ್ಕಾರಕ್ಕೆ ರಂಗಕರ್ಮಿ ಗಣೇಶ ಅಮೀನಗಡ ಅವರ ‘ರಂಗ ಪ್ರಸಂಗ’ ಪುಸ್ತಕ ಆಯ್ಕೆಯಾಗಿದೆ.

ಉಡುಪಿ: ಲೇಖಕ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ಅಂಬಾತನಯ ಮುದ್ರಾಡಿ ಅವರ ಸಂಸ್ಮರಣೆಯಲ್ಲಿ ಉಡುಪಿ ರಂಗಭೂಮಿಯು ನೀಡುವ ವಾರ್ಷಿಕ ಪುಸ್ತಕ ಪ್ರಶಸ್ತಿಯ ಮೂರನೇ ವರ್ಷದ ಪುರಸ್ಕಾರಕ್ಕೆ ರಂಗಕರ್ಮಿ ಗಣೇಶ ಅಮೀನಗಡ ಅವರ ‘ರಂಗ ಪ್ರಸಂಗ’ ಪುಸ್ತಕ ಆಯ್ಕೆಯಾಗಿದೆ.

ತಲ್ಲೂರ್ಸ್‌ ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಕತ್ವದ ಈ ಪ್ರಶಸ್ತಿಯು 15 ಸಾವಿರ ರು. ನಗದು, ಪ್ರಶಸ್ತಿಪತ್ರ, ಸ್ಮರಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಉಡುಪಿ ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.ಸ್ವತಂತ್ರ, ಸೃಜನಶೀಲ ನಾಟಕ ಕೃತಿ ಮತ್ತು ಗಂಭೀರ ಚಿಂತನೆಯ ನಾಟಕೇತರ ಕೃತಿಗಳಿಗೆ ಪರ್ಯಾಯ ವರ್ಷಗಳಲ್ಲಿ ನೀಡಲಾಗುವ ಈ ಪ್ರಶಸ್ತಿಯು ಈ ವರ್ಷ ನಾಟಕೇತರ ಪುಸ್ತಕಕ್ಕೆ ಮೀಸಲಿತ್ತು. ಪ್ರಶಸ್ತಿಗೆ ಆಯ್ಕೆಯಾದ ಗಣೇಶ ಅಮೀನಗಡ ‘ರಂಗ ಪ್ರಸಂಗ’ ಕೃತಿಯು ಅವರ ಸುದೀರ್ಘ ರಂಗಭೂಮಿ ಒಡನಾಟದ ದಾಖಲೆಯಂತಿದೆ. ಇದರ ಮೂಲಕ ಸಾಧ್ಯವಾಗುವ ತಿಳಿವಿನ ಹೊಳಹುಗಳನ್ನು ಗುರುತಿಸಿ, ತೀರ್ಪುಗಾರರ ಸಮಿತಿಯು ಅವರ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆಯೆಂದು ಸ್ಪರ್ಧೆಯ ಸಂಚಾಲಕ ಬೆಳಗೋಡು ರಮೇಶ ಭಟ್ಟರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಥಣಿಯಿಂದ ಶ್ರೀಶೈಲಕ್ಕೆ ಬಸ್ ಸೇವೆಗೆ ಚಾಲನೆ
ಷಡ್ಯಂತ್ರಕ್ಕೆ ನಾಡಗೌಡರಿಗೆ ಮತ್ತೆ ಸಚಿವ ಸ್ಥಾನ ಬಲಿ!