ಕನ್ನಡಪ್ರಭ ವಾರ್ತೆ ಕಮಲನಗರ
ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಅವರು, ಡಾ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಅವರು ಸಮಾನತೆ ಮತ್ತು ಪ್ರಗತಿಯ ಕನಸು ಕಂಡ ಮೇರು ನಾಯಕರಾಗಿದ್ದರು. ಅವರ ತತ್ವಾದರ್ಶಗಳು ಎಲ್ಲರ ಜೀವನಕ್ಕೆ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು.
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ಉಳಿಯಬೇಕು ಎಂದು ಹೋರಾಟ ಮಾಡಿದವರು ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವ ಪಿತಾಮಹ ಎಂದು ಕರೆಯುತ್ತಾರೆ. ಇಂಥ ಮಹಾನ್ ನಾಯಕ ರಚಿಸಿದ ಸಂವಿಧಾನದಿಂದ ದೇಶ ನಡೆಯುತ್ತಿದೆ. ಡಾ. ಅಂಬೇಡ್ಕರ್ ಅವರ ಜೀವನ, ಅವರ ಬದುಕು ಪ್ರತಿಯೊಬ್ಬ ನಾಗರಿಕನಿಗೂ ಮಾದರಿಯಾಗಬೇಕು, ಆದರ್ಶವಾಗಬೇಕು ಎಂದು ಹೇಳಿದರು.ಗ್ರೇಡ್-2 ತಹಸೀಲ್ದಾರ ರಮೇಶ ಪೇದ್ದೆ, ತಾ.ಪಂ ಇಒ ಶಿವಕುಮಾರ ಘಾಟೆ, ಕಂದಾಯ ನಿರೀಕ್ಷಕ ಪ್ರವೀಣ ಬಿರಾದಾರ, ಕಮಲನಗರ ಸಿಆರ್ಸಿ ನಾಗೇಶ ಸಂಗಮೆ, ಉಮಾಕಾಂತ ಮಹಾಜನ, ಗ್ರಾಮದ ನಾಗರೀಕರಾದ ಜ್ಞಾನೇಶ್ವರ ಹಿಪ್ಪಳಗಾಂವೆ, ಅಮೋಲ ಸೂರ್ಯವಂಶಿ, ಬುದ್ಧಬುಷನ, ಗುರುನಾಥ ಪಾಟೀಲ್, ಪ್ರವೀಣ ಸೋಮವಂಶಿ, ಅಮರ ವಾನಖೇಡೆ, ರೋಹಿತ ಗೋಖಲೆ, ಧನರಾಜ ಲಾಮತೂರೆ, ನಿಲೇಶ ಯಾದವರಾವ ಗಾಯಕವಾಡ ಹಾಗೂ ಅನೇಕರು ಪಾಲ್ಗೊಂಡಿದ್ದರು.