ಜಿಲ್ಲಾ ಪಾಂಚಜನ್ಯ ಕಚೇರಿಯಲ್ಲಿ ನಡೆದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ
ವಿಶ್ವವೇ ಭಾರತದತ್ತ ತಿರುಗಿ ನೋಡುವಂಥ ಸಂವಿಧಾನ ರಚಿಸಿದ ಅಂಬೇಡ್ಕರ್ ಬಡತನ, ಅಸ್ಪೃಶ್ಯತೆ ಹೋಗಲಾಡಿಸಲು ಚುನಾವಣೆ ಅಖಾಡಕ್ಕೆ ಕಾಲಿಟ್ಟರು. ಆದರೆ, ಕಾಂಗ್ರೆಸ್ ಕೆಲವು ಕಮ್ಯೂನಿಸ್ಟ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಂಬೇಡ್ಕರ್ ವಿರುದ್ಧವೇ ಪರಿಶಿಷ್ಟರನ್ನು ಎತ್ತಿಕಟ್ಟಿ ಸೋಲಿಸಿ, ಅಪಮಾನಿಸಿದರು ಎಂದರು.ಅಂಬೇಡ್ಕರ್ಗೆ ಭಾರತ ರತ್ನ ಕೊಡುವಲ್ಲಿ ಕಾಂಗ್ರೆಸ್ ವಿಫಲವಾಗಿತ್ತು. ಬದುಕಿದ್ದಾಗಲೇ ನೆಹರು, ಇಂದಿರಾಗಾಂಧಿ ತಮಗೇ ತಾವೇ ಶ್ರೇಷ್ಠರು ಎಂದು ಭಾರತ ರತ್ನ ಪಡೆದುಕೊಂಡರು. ಸ್ಮಾರಕ ವಿಚಾರದಲ್ಲೂ ಕಾಂಗ್ರೆಸ್ ಹಿನ್ನೆಡೆ ತೋರಿತು. ತದ ನಂತರ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ 1991ರಲ್ಲಿ ಅಧಿಕಾರ ಹಿಡಿದು ಮೊಟ್ಟಮೊದಲು ಸ್ಮಾರಕ ನಿರ್ಮಿಸಿ ಗೌರವ ಸೂಚಿಸಿತು ಎಂದರು.ಕಾಂಗ್ರೆಸ್ ಅಧಿಕಾರ ಉಳಿವು, ವೈಯಕ್ತಿಕ ಸ್ವಾತಂತ್ರ್ಯಕ್ಕಾಗಿ ಸಂವಿಧಾನ ಅನೇಕ ಬಾರಿ ತಿದ್ದುಪಡಿ ಮಾಡಿದೆ. ಇದೀಗ ಅಧಿಕಾರ ಕಳೆದುಕೊಳ್ಳಲಿದೆ ಎಂಬ ಭಯದಿಂದ ಸಂವಿಧಾನ ಕೈಪಿಡಿ ಹಿಡಿದುಕೊಂಡಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸಂವಿಧಾನ ಅಂಬೇಡ್ಕರ್ ರಚನೆಯಲ್ಲ, ಹಿಂದೆಯೇ ರಚಿಸಲಾಗಿತ್ತು ಎಂದು ಹೇಳಿ ಅಂಬೇಡ್ಕರ್ ಆಶಯಕ್ಕೆ ಕೊಡಲಿ ಪೆಟ್ಟು ಹಾಕಿದ್ದು ಈ ಬಗ್ಗೆ ಕ್ರಮ ಯಾವ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕುರುವಂಗಿ ವೆಂಕಟೇಶ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ಶೆಟ್ಟಿ ಮಾತನಾಡಿದರು. ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತರಾಮಭರಣ್ಯ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮಹಿಳಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್ಕುಮಾರ್, ನಗರಸಭೆ ಉಪಾಧ್ಯಾಕ್ಷೆ ಅನು ಮಧುಕರ್, ಸದಸ್ಯೆ ರೂಪ, ಮುಖಂಡರಾದ ಕೆಂಪನಹಳ್ಳಿ ಪುಷ್ಪರಾಜ್, ಕೋಟೆ ರಂಗನಾಥ್, ಸೋಮಶೇಖರ್, ಬಿ.ರಾಜಪ್ಪ, ನಾಗರಾಜ್, ನೆಟ್ಟೆಕೆರೆಹಳ್ಳಿ ಜಯಣ್ಣ ಉಪಸ್ಥಿತರಿದ್ದರು. 14 ಕೆಸಿಕೆಎಂ 3ಚಿಕ್ಕಮಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ನಡೆಯಿತು. ಸಿ.ಟಿ. ರವಿ, ದೇವರಾಜ್ ಶೆಟ್ಟಿ, ಪುಷ್ಪರಾಜ್ ಇದ್ದರು.