ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ಕಲ್ಪಿಸಿದ ಮಹಾನ್ ಚೇತನ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Apr 28, 2026, 01:30 AM IST
27ಕೆಎಂಎನ್ ಡಿ20 | Kannada Prabha

ಸಾರಾಂಶ

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರ ಮತ್ತು ಅಸ್ಪೃಶ್ಯರ ದನಿಯಾಗಿ ಅವರಿಗೆ ಸ್ವಾಭಿಮಾನದ ಬದುಕಿನ ದಾರಿ ತೋರಿದ ಧೀಮಂತ ನಾಯಕರು. ದಮನಿತರ ನಡುವೆ ಸಾಮಾನ್ಯ ವ್ಯಕ್ತಿಯಾಗಿ ಹುಟ್ಟಿ, ತಮ್ಮ ಅಸಾಮಾನ್ಯ ಪ್ರತಿಭೆ, ಅಧ್ಯಯನಶೀಲತೆ ಮತ್ತು ದೂರದೃಷ್ಟಿತ್ವದಿಂದ ಮಹಾನ್ ಶಕ್ತಿಯಾಗಿ ಬೆಳೆದರು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನಾನು ಇಂದು ಶಾಸಕನಾಗಿದ್ದೇನೆ. ಅದೇ ರೀತಿ ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗಳಿಗೂ ಹಕ್ಕುಗಳು ಮತ್ತು ಸ್ವಾತಂತ್ರ್ಯ ಕಲ್ಪಿಸಿದ ಮಹಾನ್ ಚೇತನ ಎಂದು ಶಾಸಕ ಕೆ.ಎಂ.ಉದಯ್ ಬಣ್ಣಿಸಿದರು.

ಸಮೀಪದ ಮಣಿಗೆರೆ ಗ್ರಾಮದಲ್ಲಿ ಜೈಭೀಮ್ ಬಾಯ್ಸ್ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜಯಂತಿ ಉದ್ಘಾಟಿಸಿ ಮಾತನಾಡಿ, ದೇಶದ ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಜ್ಞಾನದಿಂದ ನೀಡಿದ ದೇಶದ ಸರ್ವ ಶ್ರೇಷ್ಠ ಗ್ರಂಥ ಭಾರತ ಸಂವಿಧಾನದಡಿ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವವನ್ನು ಒದಗಿಸಿ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರ ಮತ್ತು ಅಸ್ಪೃಶ್ಯರ ದನಿಯಾಗಿ ಅವರಿಗೆ ಸ್ವಾಭಿಮಾನದ ಬದುಕಿನ ದಾರಿ ತೋರಿದ ಧೀಮಂತ ನಾಯಕರು. ದಮನಿತರ ನಡುವೆ ಸಾಮಾನ್ಯ ವ್ಯಕ್ತಿಯಾಗಿ ಹುಟ್ಟಿ, ತಮ್ಮ ಅಸಾಮಾನ್ಯ ಪ್ರತಿಭೆ, ಅಧ್ಯಯನಶೀಲತೆ ಮತ್ತು ದೂರದೃಷ್ಟಿತ್ವದಿಂದ ಮಹಾನ್ ಶಕ್ತಿಯಾಗಿ ಬೆಳೆದರು ಎಂದರು.

ಮೈಸೂರಿನ ಉರಿಲಿಂಗಿಪೆದ್ದಿ ಮಠದ ಪೀಠಾಧ್ಯಕ್ಷ ಶ್ರೀಜ್ಞಾನ ಪ್ರಕಾಶ್ ಸ್ವಾಮೀಜಿ ಮಾತನಾಡಿ, ದೇಶಕ್ಕೆ ಸಂವಿಧಾನ ಮೂಲಕ ಭದ್ರ ಬುನಾದಿ ಹಾಕಿಕೊಟ್ಟ ವಿಶ್ವದ ಜ್ಞಾನಸೂರ್ಯ ಡಾ.ಬಿ.ಆರ್. ಅಂಬೇಡ್ಕರ್ ತೋರಿದ ಮಾರ್ಗದಲ್ಲಿ ಸಾಗಿ, ಉತ್ತಮ ಶಿಕ್ಷಣ ಪಡೆದು ಅನ್ಯಾಯದ ವಿರುದ್ಧ ಹೋರಾಟ ನಡೆಸಿ ವೆಲ್ಲರೂ ಸಂಘಟಿತರಾಗಿ ಜೀವನ ಸಾಗಿಸೋಣ ಎಂದರು.

ವಿಶೇಷವಾಗಿ ಹೆಣ್ಣುಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದಾಗ ಮಾತ್ರ ಅಂಬೇಡ್ಕರ್ ರವರ ಆಶಯವೂ ಈಡೇರುತ್ತದೆ. ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಿ ಹಾಗೂ ವಿವಿಧ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಜಾಗೃತಿ ಸಮಿತಿ ಸದಸ್ಯ ಎಸ್.ಚಿದಂಬರ ಮೂರ್ತಿ, ಸಿಪಾಯಿ ಶ್ರೀನಿವಾಸ್, ಡಾ.ಅರ್ಜುನ್, ಮಣಿಗೆರೆ ಗ್ರಾಮದ ಮುಖಂಡರಾದ ಕರುಣ ಎಂ.ಎಸ್, ಪದ್ಮೇಶ್, ದೇವರಾಜು, ವೆಂಕಟೇಶ್, ಶ್ರೀನಿವಾಸ್, ಕೆ.ಹೊಂಬಯ್ಯ, ಪುಟ್ಟಲಿಂಗಯ್ಯ,ರಾಜು, ಗುಡಿಗೆರೆ ರಾಘವೇಂದ್ರ, ಬಸವರಾಜು, ಅಂಬರಹಳ್ಳಿ ಸ್ವಾಮಿ ಸೇರಿದಂತೆ ಜೈ ಭೀಮ್ ಬಾಯ್ಸ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗುವಂತೆ ಭಕ್ತರನ್ನು ಕಾಣುತ್ತಿದ್ದ ಸಿದ್ದಗಂಗಾ ಶ್ರೀಗಳು: ಜಗದೀಶ್‌ ಶೆಟ್ಟರ್
ಒಂಟಿ ಸಲಗ ಸೆರೆಹಿಡಿದ ಅರಣ್ಯ ಸಿಬ್ಬಂದಿ