ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

KannadaprabhaNewsNetwork |  
Published : Apr 15, 2026, 01:30 AM IST
999 | Kannada Prabha

ಸಾರಾಂಶ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ, ತುಮಕೂರು

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ,ರಾಜ್ಯಮಟ್ಟದ ಬಾಬೂ ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತ ಹೋರಾಟಗಾರರಾದ ನರಸೀಯಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಇಕ್ಬಾಲ್ ಅಹಮದ್ ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮ ಕುರಿತು ಮಾತನಾಡಿದ ಮಾಜಿ ಶಾಸಕ ಎಸ್.ಷಪಿ ಅಹಮದ್, ಶಿಕ್ಷಣ, ರಾಜಕೀಯ, ಸಾಮಾಜಿಕ ಸ್ಥಾನಮಾನಗಳಿಂದ ವಂಚಿತವಾದ ಸಮುದಾಯಗಳಿಗೆ ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿದ ಕೀರ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಎಲ್ಲಾ ವರ್ಗದ ಜನರು ಸಮಾನತೆಯಿಂದ ಬದುಕುವಂತಹ ವಾತಾವರಣವನ್ನು ಕಲ್ಪಿಸಿದ ಕೀರ್ತಿ ಬಾಬಾ ಸಾಹೇಬರಿಗೆ ಸಲ್ಲುತ್ತದೆ ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಅಹಮದ್ ಮಾತನಾಡಿ, ಇಡೀ ವಿಶ್ವವೇ ಇಂದು ಬಾಬಾ ಸಾಹೇಬರ ಜನ್ಮ ದಿನವನ್ನು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ದಿನವನ್ನಾಗಿ ಆಚರಿಸುತ್ತಿದೆ.ಅಸ್ಪಷ್ಯತೆಯ ವಿರುದ್ಧ ಜೀವನದ ಕೊನೆಯ ವರೆಗೂ ಹೋರಾಟ ಮಾಡಿದವರು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಮಾತನಾಡಿ, ಏಪ್ರಿಲ್ 05 ರಂದು ನಡೆದ ಬಾಬೂ ಜಗಜೀವನರಾಂ ಜಯಂತಿಯಂದು ನಮ್ಮ ಪಕ್ಷದ ಹಿರಿಯ ಮುಖಂಡರಾದ ನರಸೀಯಪ್ಪ ಅವರಿಗೆ ರಾಜ್ಯಮಟ್ಟದ ಬಾಬು ಜಗಜೀವನ್ ರಾಂ ಪ್ರಶಸ್ತಿ ನೀಡಿದೆ.ಇದು ನಿಜಕ್ಕೂ ಅವರಿಗೆ ಆರ್ಹವಾಗಿ ಸಂದ ಗೌರವವಾಗಿದೆ. ಮಂಡಿಪೇಟೆ ಹಮಾಲಿಯಾಗಿ, ಪ್ರೊ.ಬಿ.ಕಷ್ಣಪ್ಪ ಅವರೊಂದಿಗೆ ದಸಂಸ ಕಟ್ಟಿ, ದಲಿತ ಹೋರಾಟಕ್ಕೆ ತಮ್ಮ ಬದುಕನ್ನು ಮೀಸಲಿಟ್ಟವರು ನರಸೀಯಪ್ಪ. ಇದು ನಮ್ಮೆಲ್ಲರಿಗೂ ಸಂದ ಗೌರವ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಇತ್ತೀಚಗೆ ನೇಮಕಗೊಂಡಿರುವ ಸಮತಿ ಎಂಬುವವರು ಯಾರು ಎಂದು ಬಹುತೇಕರಿಗೆ ತಿಳಿದಿಲ್ಲ. ಅಲ್ಲದೆ ಅವರು ತುಮಕೂರು ಲೋಕಸಭಾ ಕ್ಷೇತ್ರದವರಲ್ಲ. ಬೆಂಗಳೂರು ಗ್ರಾಮಾಂತರ ಲೋಕಸಭಾದ ನಿವಾಸಿ ಮತ್ತು ಮತದಾರರಾಗಿದ್ದಾರೆ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಗಮನಕ್ಕಾಗಲಿ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕಾಗಲಿ ತರದೆ, ನೇರವಾಗಿ ಕೆಪಿಸಿಸಿ ಮಹಿಳಾ ಅಧ್ಯಕ್ಷರಿಂದ ನೇಮಕಾತಿ ಪತ್ರ ಪಡೆದಿರುವುದು ಸರಿಯಲ್ಲ. ಕೂಡಲೇ ಆಗಿರುವ ಪ್ರಮಾದ ಸರಿಪಡಿಸಬೇಕು.ತುಮಕೂರು ಲೋಕಸಭಾ ಕ್ಷೇತ್ರದ ಕಾರ್ಯಕರ್ತರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿದರು. ಸಮಾರಂಭದಲ್ಲಿ ಹಿರಿಯ ಮುಖಂಡ ಜಿ.ಎಚ್.ಷಣ್ಮುಗಪ್ಪ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹೇಶ್, ಫಯಾಜ್, ಪ್ರಸನ್ನಕುಮಾರ್, ಶಿವಾಜಿ, ಜಯಮೂರ್ತಿ, ನಿಂಗರಾಜು, ಕುಮಾರಸ್ವಾಮಿ, ಅನಿಕುಮಾರ್, ಧಾರ್ಮಿಕ ಪರಿಷತ್ ಸದಸ್ಯ ಶ್ರೀನಿವಾಸಕುಮಾರ್,ಸಂಜೀವಕುಮಾರ್,ಅಂಬರೀಷ್, ಇರ್ಫಾನ್ ಅಹಮದ್, ನಯಾಜ್ ಅಹಮದ್, ಮಹಬೂಬ್ ಪಾಷ, ಗುರುಪ್ರಸಾದ್, ಸುಜಾತ, ನಾಗಮಣಿ, ವಿಜಯಲಕ್ಷ್ಮೀ, ಸುವರ್ಣಮ್ಮ, ಸೈಯದ್ ದಾದಾಪೀರ್, ಸಿದ್ದಲಿಂಗೇಗೌಡ, ತರುಣೇಶ್, ಪಂಚಾಕ್ಷರಯ್ಯ, ಲಕ್ಷ್ಮಣಯ್ಯ, ಮಂಜುನಾಥ್, ರೇವಣ್ಣಸಿದ್ದಯ್ಯ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಮೆ ಹೆಸರಲ್ಲಿ ರಾಜಕೀಯ ಸರಿಯಲ್ಲ: ಶಾಸಕ ಬಾಲಕೃಷ್ಣ
ಮನೆ ಮುಂದೆಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ