ಗುಂಡರ್ಲಹಳ್ಳಿ ಗ್ರಾಮದ ಅಂಬೇಡ್ಕರ್‌ ಜಯಂತಿ

KannadaprabhaNewsNetwork |  
Published : Apr 15, 2024, 01:18 AM IST
ಫೋಟೋ 14ಪಿವಿಡಿ5133ನೇ ಜಯಂತಿ ಅಂಗವಾಗಿ ಅಂಬೇಡ್ಕರ್‌ ಯುವಕರ ಸಂಘದದಿಂದ ತಾಲೂಕಿನ ಗುಂಡಾರ್ಲಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬಾಬಾಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ್‌ರಾಮ್‌ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ,ಅಡಿಟರ್‌ ಗೋಪಾಲಕೃಷ್ಣ ಇತರೆ ಗಣ್ಯರು ಮಾತನಾಡಿದರು. | Kannada Prabha

ಸಾರಾಂಶ

ಸಂವಿಧಾನ ಅರ್ಥೈಸಿಕೊಳ್ಳುವ ಮೂಲಕ ಪ್ರಗತಿ ಕಾಣುವಂತೆ ತಾಲೂಕು ಕಾಂಗ್ರೆಸ್‌ ಮುಖಂಡ, ಬ್ಯಾಡನೂರು ಗ್ರಾಪಂ ಅಧ್ಯಕ್ಷ ಗುಂಡರ್ಲಹಳ್ಳಿ ಅಡಿಟರ್‌ ಗೋಪಾಲಕೃಷ್ಣ ಕರೆ ನೀಡಿದರು

ಪಾವಗಡ: ಸಂವಿಧಾನ ಅರ್ಥೈಸಿಕೊಳ್ಳುವ ಮೂಲಕ ಪ್ರಗತಿ ಕಾಣುವಂತೆ ತಾಲೂಕು ಕಾಂಗ್ರೆಸ್‌ ಮುಖಂಡ, ಬ್ಯಾಡನೂರು ಗ್ರಾಪಂ ಅಧ್ಯಕ್ಷ ಗುಂಡರ್ಲಹಳ್ಳಿ ಅಡಿಟರ್‌ ಗೋಪಾಲಕೃಷ್ಣ ಕರೆ ನೀಡಿದರು.

ಅವರು ಅಂಬೇಡ್ಕರ್‌ ಯುವ ವೇದಿಕೆ ವತಿಯಿಂದ ಭಾನುವಾರ ತಾಲೂಕಿನ ಗುಂಡರ್ಲಹಳ್ಳಿ ಗ್ರಾಮದ ವಿಎಸ್‌ಎಸ್‌ಎಸ್‌ಎನ್‌ ಭವನ ಅವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ್‌ ರಾಮ್‌ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಈ ದೇಶಕ್ಕೆ ಅಂಬೇಡ್ಕರ್‌ ಕೊಡುಗೆ ಅಪಾರವಾಗಿದೆ. ಅವರು ತಮ್ಮ ಸಂವಿಧಾನದ ಮೂಲಕ ಎಲ್ಲ ವರ್ಗದ ಜನತೆಗೆ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ದೇಶದ ಸುಭದ್ರತೆ,ರಕ್ಷಣೆ ಹಾಗೂ ಪ್ರತಿಯೊಬ್ಬರ ಪ್ರಗತಿಗೆ ಅದ್ಯತೆ ನೀಡಿದ್ದಾರೆ. ಅಂತಹ ಮಹನ್‌ ನಾಯಕನನ್ನು ನಾವು ಸ್ಮರಿಸಬೇಕಿದೆ ಎಂದರು.

ಹಿರಿಯ ಮುಖಂಡರಾದ ಬಲರಾಮರೆಡ್ಡಿ, ನಿವೃತ್ತ ಮುಖ್ಯೋಪಾಧ್ಯಾಯ ನರಸಪ್ಪ, ಮದ್ದಿಬಂಡೆ ಎಂ.ಜೆ.ಕೃಷ್ಣಮೂರ್ತಿ, ಗೋವಿಂದರಾಜು,ನಾಗಪ್ಪ ಓಬಳ ನರಸಿಂಹಪ್ಪ, ಗಂಗಾಧರಪ್ಪ ನರಸಿಂಹಪ್ಪ ಗುಂಡಪ್ಪ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!