ಮುಖ್ಯಪೇದೆ ಅಮಾನತಿಗೆ ಠಾಣೆಗೆ ಮುತ್ತಿಗೆ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಆಟೋದಲ್ಲಿ ಅಂಬೇಡ್ಕರ್ ಫೋಟೋ ಹಾಕಿದ್ದಕ್ಕೆ ಪೊಲೀಸರೊಬ್ಬರು ಆಶ್ಲೀಲ ಪದಗಳಿಂದ ಬೈದಿರುವ ಆರೋಪ ಸಂಬಂಧ ಕೃತ್ಯವನ್ನು ಖಂಡಿಸಿ ಪ್ರಗತಿ ಪರ ಸಂಘಟನೆಗಳು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.3 ದಿನಗಳ ಹಿಂದೆ ವಾಹನಗಳ ತಪಾಸಣೆ ಸಮಯದಲ್ಲಿ ಗಿರೀಶ್ ಎಂಬುವರಿಗೆ ಸೇರಿದ ಆಟೋ ತಪಾಸಣೆ ಸಮಯದಲ್ಲಿ ಮುಖ್ಯಪೇದೆ ಮಂಜುನಾಥ್ ಅವರು ಅಂಬೇಡ್ಕರ್ ಫೋಟೋ ಹಾಕಿದ್ದಕ್ಕೆ ನಿಂದಿಸಿದರೆಂದು ಆರೋಪಿಸಿ ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಬೇಕು ಎಂದು ಮನವಿ ಸಲ್ಲಿಸಿದರು.
ದಲಿತ ಮುಖಂಡ ಸುಭಾಷ್ ಮಾಡ್ರಹಳ್ಳಿ ಮಾತನಾಡಿ, ಪಟ್ಟಣದಲ್ಲಿ ಗಾಂಜಾ ಮಾರಾಟ, ಜೂಜಾಟ, ಅಕ್ರಮ ಮದ್ಯ ಮಾರಾಟದಂಥ ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕಲು ಸ್ಥಳೀಯ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ಎಲ್. ಸುರೇಶ್ ಮಾತನಾಡಿ, ಪಟ್ಟಣದಲ್ಲಿ ತ್ರಿಬಲ್ ರೈಡಿಂಗ್, ವಿಮೆ ಇಲ್ಲ, ಎಫ್ಸಿ ಇರುವುದಿಲ್ಲ, ಹೆಲ್ಮೆಟ್ ಹಾಕಲ್ಲ. ಈ ಬಗ್ಗೆ ತಪಾಸಣೆ ನಡೆಸಿ ದಂಡ ಹಾಕಿ. ಅದನ್ನು ಬಿಟ್ಟು ನಿಂದಿಸುವುದು ಏಕೆ ಎಂದು ಸ್ಥಳೀಯ ಪೊಲೀಸರನ್ನು ಪ್ರಶ್ನಿಸಿದರು.
ಈ ವೇಳೆ ದಲಿತ ಮುಖಂಡ ಸೋಮಣ್ಣ, ಆಟೋ ಚಾಲಕ ಗಿರೀಶ್ ಸೇರಿದಂತೆ ಹಲವರಿದ್ದರು.
೪ಜಿಪಟಿ೬