ಕನ್ನಡಪ್ರಭ ವಾರ್ತೆ ಉಡುಪಿ
ಒಂದು ವಾರ ಕಾಲ ನಡೆದ ಸಪ್ತಾಹದಲ್ಲಿ ಸೇವೆ, ಸ್ವಚ್ಚತೆ, ವಿಶೇಷ ಉಪನ್ಯಾಸಗಳ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಯಿತು. ರಾಷ್ಟ್ರಾದ್ಯಂತ ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸಾಮಾಜಿಕ ಸಾಮರಸ್ಯ ದಿನವನ್ನಾಗಿ ಎ.ಬಿ.ವಿ.ಪಿ. ಆಚರಿಸುತ್ತಾ ಬಂದಿದೆ. ಸಮಾಜದ ಸರ್ವತೋಮುಖ ಹಿತದೃಷ್ಟಿಯಲ್ಲಿ ಕಾರ್ಯನಿರ್ವಹಿಸಿದ ಅಂಬೇಡ್ಕರ್ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಿ ನೋಡದೇ ರಾಷ್ಟ್ರಪುತ್ರನಾಗಿ ಸ್ಮರಿಸಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.
ಉದ್ಘಾಟನಾ ಹಾಗೂ ಸಮಾರೋಪದ ಕಾರ್ಯಕ್ರಮದಲ್ಲಿ ಎಬಿವಿಪಿ ಹಿರಿಯ ಕಾರ್ಯಕರ್ತ ಅಡ್ವೊಕೇಟ್ ಗಾನವಿ ಪೂಜಾರಿ ಅವರು ಉಪಸ್ಥಿತರಿದ್ದರು. ವಿವಿಧ ಕಾರ್ಯಕ್ರಮದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಾಮಾಜಿಕ ಜಾಲತಾಣ ಸಹ ಸಂಚಾಲಕರಾದ ಶ್ರೀವತ್ಸ, ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ, ಮಂಗಳೂರು ವಿಭಾಗ ಸಾಮಾಜಿಕ ಜಾಲತಾಣ ಪ್ರಮುಖರಾದ ನವೀನ್, ವಿಭಾಗ ಖೇಲೋ ಭಾರತ್ ಪ್ರಮುಖ್ ಸ್ವಸ್ತಿಕ್, ಜಿಲ್ಲಾ ಸಂಚಾಲಕರಾದ ಕಾರ್ತಿಕ್, ತಾಲೂಕು ಸಂಚಾಲಕರಾದ ಶ್ರೇಯಸ್ ಅಂಚನ್, ಸಹ-ಸಂಚಾಲಕ ಅನಂತಕೃಷ್ಣ, ನಗರ ಕಾರ್ಯದರ್ಶಿ ಮಾಣಿಕ್ಯ ಭಟ್, ಸಹ ಕಾರ್ಯದರ್ಶಿ ಶಿವನ್, ನಗರ ಕಾರ್ಯಾಲಯ ಪ್ರಮುಖ್ ರಕ್ಷಿತಾ, ಹಾಸ್ಟೆಲ್ ಸಹ-ಪ್ರಮುಖ್ ಅಭಿಲಾಷಿನಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.