ಕನ್ನಡಪ್ರಭ ವಾರ್ತೆ ಅಥಣಿ
ಪಟ್ಟಣದ ಅಂಬೇಡಕರ್ ವೃತ್ತದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಭಾನುವಾರ ಮಾಲಾರ್ಪಣೆ ಮಾಡಿ ಮಾತನಾಡಿ, ಡಾ. ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾಗಿರುವ ಸಂವಿಧಾನ ನೀಡಿದ್ದಾರೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಪಾಲಿಸಿದಾಗ ದೇಶದ ಪ್ರಗತಿಗೆ ಪೂರಕವಾಗಲಿದೆ ಎಂದು ಹೇಳಿದರು.
ನಂತರ ಪಟ್ಟಣದ ತೋಟಗಾರಿಕೆ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಸಂಭ್ರದಿoದ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಂಬೇಡ್ಕರ್ ಸಮುದಾಯಗಳ ಪ್ರಗತಿ ಸಂಸ್ಥೆ ಧಾರವಾಡ ಉಪನ್ಯಾಸಕ ಲಕ್ಷ್ಮಣ ಬಕಾಯಿ ಮಾತನಾಡಿ, ಭಾರತದಲ್ಲಿ ಸಮಾನತೆ ದಿನ ಎಂದು ಆಚರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಅವರು ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು. ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯದಂತಹ ಸಾಮಾಜಿಕ ಅನಿಷ್ಠಗಳ ವಿರುದ್ಧ ದಲಿತರು ಮತ್ತು ಕೆಳಜಾತಿಗಳ ಹಕ್ಕುಗಳಿಗಾಗಿ ಹೋರಾಡಿದ ಮಹಾ ನಾಯಕರಾಗಿದ್ದಾರೆ. ಅವರು ಬರೆದಿರುವ ಸಂವಿಧಾನ ಇಂದಿಗೂ ವಿಶ್ವಕ್ಕೆ ಮಾದರಿ ಮಹಾ ಗ್ರಂಥವಾಗಿದೆ. ತಮ್ಮ ಜೀವನದುದ್ದಕ್ಕೂ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಮತ್ತು ಸಮಾಜದಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಸಮಾನ ಸ್ಥಾನಮಾನಕ್ಕಾಗಿ ಹೋರಾಡಿದರು ಎಂದರು.
ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ವಾಣಿ ಯು ಮಾತನಾಡಿದರು. ಸಮಾಜ ಕಲ್ಯಾಣ ಅಧಿಕಾರಿ ಬಸವರಾಜ ಯಾದವಾಡ, ತಾಪಂ ಇಒ ಶಿವಾನಂದ ಕಲ್ಲಾಪೂರ, ಡಿವೈಎಸ್ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ, ತಾಲೂಕು ವೈದ್ಯಾಧಿಕಾರಿ ಡಾ, ಬಸನಗೌಡ ಕಾಗೆ, ಪುರಸಭೆ ಮುಖ್ಯಾಧಿಕಾರಿ ನಾಗಣ್ಣ ಪರೀಟ್, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಶ್ರೀಕಾಂತ ಮಾಕಾಣಿ, ಮುಖಂಡರಾದ ಚಿದಾನಂದ ಸವದಿ, ರಾಮ ಮರಳೆ, ಸಿದ್ದಲಿಂಗ ಮಡ್ಡಿ, ಪ್ರಕಾಶ ಪಟ್ಟಣ, ಸಿದ್ದಾರ್ಥ ಸಿಂಗೆ, ಬಸವರಾಜ ಕಾಂಬಳೆ, ಮಿತೇಶ್ ಪಟ್ಟಣ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.