ಡಾ.ಬಿ.ಆರ್. ಅಂಬೇಡ್ಕರ್ ಭವನ, ಅನುಭವ ಕೇಂದ್ರದ ಉದ್ಘಾಟಿಸಿ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಅಭಿಮತ
ವಿಶ್ವ ಆರ್ಥಿಕತೆಯಲ್ಲಿ ಇಂದು ಭಾರತ ಆರ್ಥಿಕ ಸ್ವಾವಲಂಬಿಯಾಗಿ ಮತ್ತು ನಾಲ್ಕನೇ ಅತಿ ದೊಡ್ಡ ಆರ್ಥಿಕ ರಾಷ್ಟ್ರವಾಗಿ ರೂಪುಗೊಳ್ಳಲು ಅರ್ಥಶಾಸ್ತ್ರಜ್ಞ ಶ್ರೇಷ್ಠ ಆರ್ಥಿಕ ತಜ್ಞ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರ ದೂರದೃಷ್ಟಿಯ ಆರ್ಥಿಕ ಚಿಂತನೆಗಳು ಪ್ರಮುಖ ಕಾರಣವಾಗಿದ್ದು, ಅವರು ವಿದೇಶದಲ್ಲಿ ಪಡೆದ ಜ್ಞಾನಾರ್ಜನೆ ಫಲವಾಗಿ ರಚಿಸಿದ ಸಂವಿಧಾನ ಮೂಲಕ ದೇಶದ ದಿಕ್ಕನ್ನೇ ಬದಲಾಯಿತೆಂದು ಉಪಮುಖ್ಯಮಂತ್ರಿ ಮತ್ತು ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ನುಡಿದರು.
ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಭವನ ಮತ್ತು ಅನುಭವ ಕೇಂದ್ರದ ಉದ್ಘಾಟನೆಯಲ್ಲಿ ದೀಪಬೆಳಗಿದ ನಂತರ ಮಾತನಾಡಿ, ಸರಿಸುಮಾರು 21 ಕೋಟಿ ರು. ವೆಚ್ಚದಲ್ಲಿ ಆತ್ಯಾಧುನಿಕ ವ್ಯವಸ್ಥೆಯನ್ನೊಳಗೊಂಡ ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು ಅನುಭವ ಕೇಂದ್ರ ರಾಜ್ಯದ ಬೆಂಗಳೂರು ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಇಲ್ಲವೆಂದು ಅಂತಹ ಆತ್ಯಾಧುನಿಕ ವಿನ್ಯಾಸಗಳೊಂದಿಗೆ ಸುಸಜ್ಜಿತ ಹವಾನಿಯಂತ್ರಿತ ಸೌಲಭ್ಯಗಳನ್ನು ಒಳಗೊಂಡು ನಿರ್ಮಾಣಗೊಂಡಿರುವ ಒಂದು ಸುಂದರ ಭವನವೆಂದರೆ ತಪ್ಪಾಗಲಾರದು ಎಂದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಯಾವುದೇ ನಿರ್ದಿಷ್ಟ ಧರ್ಮ, ಜಾತಿ, ಪ್ರಾಂತ್ಯಕ್ಕೆ ಸೀಮಿತರಲ್ಲ. ಅವರು ಇಡೀ ವಿಶ್ವಕ್ಕೇ ಬೆಳಕು ನೀಡಿದ ಮಹಾನ್ ಮನವತಾವಾದಿ ಸ್ವಾತಂತ್ರ್ಯಾ ನಂತರದ 80 ವರ್ಷಗಳಲ್ಲಿ ಭಾರತ, ಆರ್ಥಿಕವಾಗಿ ಸಾಮಾಜಿಕವಾಗಿ, ವೈಜ್ಞಾನಿಕವಾಗಿ ಮುಂದುವರಿದಿದ್ದರೆ, ಅದರ ಹಿಂದಿನ ಮಹಾನ್ ಶಕ್ತಿಯೇ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನ ಎಂದರು.
ಇದೇ ಸಂದರ್ಭದಲ್ಲಿ ಚಿಂತಾಮಣಿ ನಗರದಲ್ಲಿ 1.75 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಆಜಾದ್ ಚೌಕ್ ವೃತ್ತ ಹಾಗೂ 7.5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ದಿಪಡಿಸಿದ ಸಾಮರ್ಥ್ಯಸೌಧ, ತಾಲೂಕು ಪಂಚಾಯತ್ ಸಭಾಂಗಣ ಮತ್ತು ಸಭಾಭವನವನ್ನು ಉದ್ಘಾಟಿಸಲಾಯಿತು.
ಚಿತ್ರಶೀರ್ಷಿಕೆ: ಚಿಂತಾಮಣಿ ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ಮತ್ತು ಅನುಭವ ಕೇಂದ್ರದ ಉದ್ಘಾಟನೆಯಲ್ಲಿ ದೀಪಬೆಳಗಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್.