- ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸತೀಶ ಅರವಿಂದ ಹೇಳಿಕೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಬೂದಾಳು ರಸ್ತೆಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯಿಂದ ಬುಧವಾರ ಆಯೋಜಿಸಿದ್ದ ವಿಜಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾತಿ ಶೋಷಣೆ ಮತ್ತು ಗುಲಾಮಗಿರಿಯ ವಿರುದ್ಧ ಎರಡನೇ ಭಾಜಿರಾವ್ನ 28000 ಪೇಶ್ವೆ ಸೈನಿಕರನ್ನು 500 ಸ್ವಾಭಿಮಾನಿಗಳಾದ ಮಹರ್ ಸೈನಿಕರು ಹಗಲು- ರಾತ್ರಿ ಯುದ್ದ ಮಾಡಿ ವಿಜಯಶಾಲಿಯಾಗಿರುವುದು ಅವಿಸ್ಮರಣೀಯ ಎಂದರೆ ತಪ್ಪಾಗಲಾರದು ಎಂದರು.ಪುಣೆಯ ಭೀಮಾ ನದಿ ದಡದಲ್ಲಿ ನಡೆದ ಯುದ್ಧದ ನೆನಪಿಗಾಗಿ ವಿಜಯ ಸ್ತಂಭವನ್ನು ನಿರ್ಮಿಸಲಾಗಿದೆ. ಈ ಬಗ್ಗೆ ಭಾರತದಲ್ಲಿ ಎಲ್ಲೂ ಅದರ ಕುರುಹು ಇರಲಿಲ್ಲ. ಅಂಬೇಡ್ಕರ್ ಅವರು ಲಂಡನ್ನಲ್ಲಿ ಓದುತ್ತಿದ್ದಾಗ ಕೆಲವೊಂದು ದಾಖಲಾತಿಗಳಲ್ಲಿ ಕೋರೆಗಾಂವ್ನ ಕುರುಹು ಕುರಿತು ಮಾಹಿತಿ ಲಭ್ಯವಾಗುತ್ತದೆ. 1927ರಲ್ಲಿ ಅಂಬೇಡ್ಕರ್ ಅವರು ವಿಜಯ ಸ್ತಂಭಕ್ಕೆ ಭೇಟಿ ನೀಡುತ್ತಾರೆ. ಅಲ್ಲಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ಸ್ತಂಭದ ಸಾಹಸಗಾಥೆ ದೇಶದ್ಯಾಂತ ಪಸರಿಸುತ್ತದೆ ಮತ್ತು ಆ ವಿಜಯವನ್ನು ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
- - - -1ಕೆಡಿವಿಜಿ38:
ದಾವಣಗೆರೆಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯಿಂದ ವಿಜಯೋತ್ಸವ ಆಚರಿಸಲಾಯಿತು.