ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಡಾ.ನೂರುಲ್ ಹುದಾ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡ, ಪರಿಶಿಷ್ಟ ವರ್ಗಗಳ ಕುಂದುಕೊರತೆಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ನರೇಗಾದ ಸಹಾಯಕ ನಿರ್ದೇಶಕ ಮನೀಷ್ ಮಾತನಾಡಿ, ಗ್ರಾಮ ಠಾಣಾ ಜಾಗಕ್ಕೆ ಯಾವುದೇ ಕಾರಣಕ್ಕೂ ಹಕ್ಕುಪತ್ರ ಕೊಡಲು ಬರುವುದಿಲ್ಲ. ಈ ಸ್ವತ್ತು ದಾಖಲಿಸಿಕೊಡಲು ಕೇಳಬಹುದು ಎಂದರು.ಜಿಲ್ಲಾ ಪರಿಶಿಷ್ಟಜಾತಿ, ವರ್ಗಗಳ ದೌರ್ಜನ್ಯ ಸಮಿತಿ ಸದಸ್ಯ ಎಂ.ಮಹೇಶ್ ಮಾತನಾಡಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಹಿತಿ ಪಡೆದು ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ತಹಶೀಲ್ದಾರ್ ಮಾತನಾಡಿ, ಜಿಲ್ಲಾಧಿಕಾರಿಗಳಿಂದ ನಿರ್ದೇಶನ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಹಸೀಲ್ದಾರ್ ನೂರುಲ್ ಹುದಾ ಮಾತನಾಡಿ, ರಾವೂರು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಆಲಿಸಲಾಗಿದೆ. 20 ಗುಂಟೆ ಜಾಗವನ್ನು ಪರಿಶಿಷ್ಟಪಂಗಡಕ್ಕೆ ಸೇರಿದ ಸ್ಮಶಾನಕ್ಕಾಗಿ ಎಂದು ಮೀಸಲಿರಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಮಂಜೂರಾತಿ ಮಾಡಿಕೊಡುವುದಾಗಿ ಭರವಸೆ ನೀಡಿದರು.
ತಾಲೂಕಿನ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಹುತೇಕ ಅಂಬೇಡ್ಕರ್ ಭವನಗಳು ಸುಸಜ್ಜಿತವಾಗಿ ನಿರ್ಮಾಣವಾಗಿಲ್ಲ. ಕೆಲವು ಸಮುದಾಯ ಭವನಗಳ ಕಾಮಗಾರಿ ಅಪೂರ್ಣಗೊಂಡಿದೆ ಎಂದು ಪರಿಶಿಷ್ಟಜಾತಿ, ಪರಿಶಿಷ್ಟಪಂಗಡದ ಮುಖಂಡರು ಆರೋಪಿಸಿದರು. ಕರ್ಕೇಶ್ವರ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ಅಂಬೇಡ್ಕರ್ ಭವನ ನಿರ್ಮಾಣವಾಗಿದ್ದು ಕಾಮಗಾರಿ ಕಳಪೆಯಿಂದ ಕೂಡಿದ್ದು ಈವರೆಗೂ ಕಾಮಗಾರಿ ಪೂರ್ಣವಾಗಿಲ್ಲ ಎಂಬ ವಿಚಾರ ಪ್ರಸ್ತಾಪವಾಯಿತು. ಈ ನಡುವೆ ಮಾತನಾಡಿದ ಕೊಪ್ಪ ಎಪಿಎಂಸಿ ನಿರ್ದೇಶಕ ಎಚ್.ಎಂ.ಶಿವಣ್ಣ ಕರ್ಕೇಶ್ವರ ಗ್ರಾಮದ ಅಂಬೇಡ್ಕರ್ ಭವನವನ್ನು ತಳಪಾಯ ಹಾಕದೆ ನಿರ್ಮಿಸಲಾಗಿದೆ.ಈ ಬಗ್ಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿಲ್ಲ ಎಂದರು. ಬಹುತೇಕ ಅಂಬೇಡ್ಕರ್ ಭವನಗಳು ಸುಸಜ್ಜಿತವಾಗಿರದೆ ಸ್ವಸಹಾಯ ಸಂಘದ ಸಭೆಯ ನಡೆಸಲು, ಗಣಪತಿ ಕೂರಿಸಲು ಸೀಮಿತವಾಗಿದೆ ಎಂದು ವಾಲ್ಮೀಕಿ ಸಂಘದ ನಾಗರಾಜ್ ದೂರಿದರು.