ಕೋಮಸೌಹಾರ್ದ ಗ್ರಾಮದಲ್ಲಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾದರಿ: ಮೋಹನ್

KannadaprabhaNewsNetwork |  
Published : Mar 01, 2026, 03:00 AM IST
 ಪೋಟೊ ಕ್ಯಾಪ್ಸನ್:ಡಂಬಳ ಗ್ರಾಮ ಪಂಚಾಯತಿಯಲ್ಲಿ  ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ ಮೂರ್ತಿ ಅನಾವರಣ ಕಾರ್ಯಕ್ರಮದ ಕುರಿತು ಶನಿವಾರ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾದಿಗ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಮೋಹನ್ ಎಸ್ ಅಲಮೇಲ್ಕರ್  ಮಾತನಾಡಿದರು. ಸಮಿತಿ ಗೌರವಾಧ್ಯಕ್ಷರಾದ ಮರಿತೆಮ್ಮಪ್ಪ ಆದಮ್ಮನರ ಹಾಗೂ ಇತರರು ಇದ್ದರು. | Kannada Prabha

ಸಾರಾಂಶ

ಡಂಬಳದ ಭಾವೈಕ್ಯತೆ ಮತ್ತು ಕೋಮಸೌಹಾರ್ದದ ನೆಲದಲ್ಲಿ ಅಂಬೇಡ್ಕರ್ ಮೂರ್ತಿ ಅನಾವರಣವಾಗಲು ಪ್ರೇರಣೆ ಲಿಂ. ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿಗಳು ಎಂದು ಮಾದಿಗ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಮೋಹನ್ ಎಸ್ ಅಲಮೇಲ್ಕರ್ ಹೇಳಿದರು.

ಡಂಬಳ: ತಾಲೂಕಿನ ಕೆಲ ಗ್ರಾಮದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಡಂಬಳದ ಭಾವೈಕ್ಯತೆ ಮತ್ತು ಕೋಮಸೌಹಾರ್ದದ ನೆಲದಲ್ಲಿ ಅಂಬೇಡ್ಕರ್ ಮೂರ್ತಿ ಅನಾವರಣವಾಗಲು ಪ್ರೇರಣೆ ಲಿಂ. ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿಗಳು ಎಂದು ಮಾದಿಗ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಮೋಹನ್ ಎಸ್ ಅಲಮೇಲ್ಕರ್ ಹೇಳಿದರು.

ಡಂಬಳ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಮಾರ್ಚ್ 7ರಂದು ಶನಿವಾರ 6.8 ಅಡಿ ಎತ್ತರದ ಡಾ. ಬಿ.ಆರ್. ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮದ ಕುರಿತು ಶನಿವಾರ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿಗಳ ತತ್ವ-ಸಿದ್ಧಾಂತ ಹಾಗೂ ವಿಚಾರಗಳು ಜೀವಂತವಾಗಿವೆ. ಇಂದಿಗೂ ಪ್ರತಿಯೊಬ್ಬರಿಗೂ ಪ್ರೇರಣಾ ಶಕ್ತಿಯಾಗಿದ್ದಾರೆ. ಇತರೆ ತಾಲೂಕು ಹಾಗೂ ಜಿಲ್ಲೆಗೆ ಮೂರ್ತಿ ಪ್ರತಿಷ್ಠಾಪನೆ ಮಾದರಿಯಾಗಿದೆ. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಎಚ್.ಡಿ. ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿ, ಡಂಬಳ ಕೋಮಸೌಹಾರ್ದದ ಕೇಂದ್ರಬಿಂದು. ಈ ಗ್ರಾಮದ ಮಣ್ಣಿನ ಸತ್ವದಲ್ಲಿ ಗಟ್ಟಿತನವಿದೆ. ಸೌಹಾರ್ದದ ಅಂಶಗಳಿವೆ. ಇಲ್ಲಿ ಉದಾರತೆ ಮತ್ತು ಮಾನವಿಯ ಮೌಲ್ಯಗಳು ಜೀವಂತವಾಗಿವೆ. ಇಡೀ ದೇಶಕ್ಕೆ ಅಂಬೇಡ್ಕರ್ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ. ಪ್ರಸ್ತುತ ದಿನಗಳಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಇದ್ದಿದ್ದರೆ ಅಂಬೇಡ್ಕರ್ ಅವರು ನಮ್ಮೂಂದಿಗೆ ಇದ್ದಾರೆ ಎನ್ನುವ ಭಾವನೆ ಮೂಡುತ್ತಿತ್ತು ಎಂದು ನೆನೆದರು.

ಸಮಿತಿ ಗೌರವಾಧ್ಯಕ್ಷ ಗವಿಸಿದ್ದಪ್ಪ ಬಿಸನಳ್ಳಿ ಮಾತನಾಡಿ, ಅಂಬೇಡ್ಕರ್ ಸೇವೆ ಮಾಡುವದು ಎಂದರೆ ಅದು ಅತ್ಯಂತ ಪವಿತ್ರ ಕಾರ್ಯ. ಇಂದಿಗೂ ದಲಿತ, ಶೋಷಿತ, ನೊಂದವರು ಸಮಾಜದಲ್ಲಿ ಗೌರವದಿಂದ ಬದುಕುತ್ತಿದ್ದಾರೆ ಎಂದರೆ ಅದಕ್ಕೆ ಮೂಲ ಕಾರಣ ಅಂಬೇಡ್ಕರ್ ರಚಿಸಿದ ಸಂವಿಧಾನ ಎಂದರು.

ದಲಿತ ಮುಖಂಡ ಬಾಲರಾಜ್ ಅರಬರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಡಿ.ಎಸ್.ಎಸ್. ಬೆಳಗಾವಿ ವಿಭಾಗೀಯ ಸಂಚಾಲಕ ಸತೀಶ ಕ. ಪಾಸಿ, ದಲಿತ ಸಂಘರ್ಷಿ ಸಮಿತಿ ಜಿಲ್ಲಾ ಮಹಿಳಾ ಸಂಚಾಲಕಿ ಸುಶೀಲಾ ಎಸ್. ಚಲವಾದಿ, ಡಾ. ಬಿ.ಆರ್. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾನ ಸಮಿತಿ ಅಧ್ಯಕ್ಷ ಮರಿಯಪ್ಪ ಸಿದ್ದಣ್ಣವರ, ಗೌರವಾಧ್ಯಕ್ಷ ಮರಿತೆಮ್ಮಪ್ಪ ಆದಮ್ಮನವರ, ನಾಗಪ್ಪ ತಳವಾರ, ಕಾರ್ಯದರ್ಶಿ ಮಂಜುನಾಥ ಬಿಸನಹಳ್ಳಿ, ಸಹ ಕಾರ್ಯದರ್ಶಿ ಪ್ರಥಮ ದರ್ಜೆಗುತ್ತಿಗೆದಾರ ಗವಿಸಿದ್ದಪ್ಪ ಹಾದಿಮನಿ, ಖಜಾಂಚಿ ಮಲ್ಲಿಕಾರ್ಜುನ ಗೌಡಣ್ಣವರ, ಸಹ ಖಜಾಂಚಿ ಲಕ್ಷ್ಮಣ ಎಚ್. ದೊಡ್ಡಮನಿ, ನಿವೃತ್ತ ಶಿಕ್ಷಕ ಡಿ.ಜಿ. ಪೂಜಾರ, ಲಕ್ಷ್ಮಣ ಎನ್. ದೊಡ್ಡಮನಿ. ಅಶೋಕ ತಳಗೇರಿ, ಯಮನೂರಪ್ಪ ದೊಡ್ಡಮನಿ, ವೆಂಕಟೇಶ ತಳವಾರ, ಮಲ್ಲಪ್ಪ ಪೂಜಾರ, ಸುರೇಶ ದೊಡ್ಡಮನಿ, ಕುಮಾರ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯ ೪ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ: ದಿನೇಶ ಗುಂಡೂರಾವ್
ರಾಜ್ಯದಲ್ಲಿ ಜನರು ಆತಂಕದಲ್ಲೇ ಬದುಕುವಂತಾಗಿದೆ: ಕಾಗೇರಿ