ದೇಶದಲ್ಲಿ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಂಬೇಡ್ಕರ್: ಡಾ.ಲೋಕೇಶ

KannadaprabhaNewsNetwork |  
Published : Dec 07, 2024, 12:33 AM IST
ಕ್ಯಾಪ್ಷನ6ಕೆಡಿವಿಜಿ31ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿವಸ ಕಾರ್ಯಕ್ರಮದಲ್ಲಿ ಅಂಬೇಡ್ಕರ್  ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. | Kannada Prabha

ಸಾರಾಂಶ

ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಮೂಲಕ ಜಾತಿ ವ್ಯವಸ್ಥೆ ತೊಲಗಿಸಿ ದೇಶದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮಾನತೆ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದರು ಎಂದು ಪ್ರಾಧ್ಯಾಪಕ ಡಾ. ಎಂ.ಯು. ಲೋಕೇಶ್ ಹೇಳಿದ್ದಾರೆ.

- ಅಸ್ಪೃಶ್ಯತೆ, ಅನಕ್ಷರತೆ, ಮೌಢ್ಯಗಳ ವಿರುದ್ಧ ಹೋರಾಡಿದ್ದರು - - - ಕನ್ನಡಪ್ರಭ ವಾರ್ತೆ ದಾವಣಗೆರೆ ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಮೂಲಕ ಜಾತಿ ವ್ಯವಸ್ಥೆ ತೊಲಗಿಸಿ ದೇಶದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮಾನತೆ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದರು ಎಂದು ಪ್ರಾಧ್ಯಾಪಕ ಡಾ. ಎಂ.ಯು. ಲೋಕೇಶ್ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 68ನೇ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿವಸ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಬುದ್ಧ, ಬಸವಣ್ಣನವರ ನಂತರ ಸಮಾನತೆ, ಸಮಸಮಾಜ ಅಭಿವೃದ್ಧಿಯ ತತ್ವ- ಆದರ್ಶಗಳನ್ನು ಜಾರಿಗೊಳಿಸಿ, ನವ ಸಮಾಜದ ಪರಿಕಲ್ಪನೆಯನ್ನು ಪ್ರತಿಷ್ಠಾಪಿಸಲು ಡಾ.ಅಂಬೇಡ್ಕರ್ ಯತ್ನಿಸಿದರು. ಅಸ್ಪೃಶ್ಯತೆ, ಅಸಮಾನತೆ, ಅನಕ್ಷರತೆ, ಮೂಢನಂಬಿಕೆಯಂತಹ ಅಂಧಕಾರಗಳಿಂದ ಕೂಡಿದ ಸಮಾಜವನ್ನು ಪರಿವರ್ತಿಸಿ, ಅಭಿವೃದ್ಧಿಯ ಮುಖ್ಯವಾಹಿನಿಯಲ್ಲಿ ಕೈ ಜೋಡಿಸುವಂತೆ ಮಾಡುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಬದಲಾವಣೆಯ ಮಾತುಗಳಾಡಿ, ದೇಶದಲ್ಲಿ ಶಾಂತಿ ಕದಡುವ ಕೆಲಸ ನಡೆಯುತ್ತಿದೆ. ವಿದ್ಯಾರ್ಥಿಗಳು ಅದಕ್ಕೆ ಅವಕಾಶ ನೀಡದೇ, ಅಂಬೇಡ್ಕರ್ ಅವರ ಆಶಯವನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಬೇಕು. ಪಟ್ಟಬದ್ಧ ಹಿತಾಸಕ್ತಿಗಳಿಗೆ ಅವಕಾಶ ನೀಡದೇ ಜಾಗೃತರಾಗಿ, ಮತದಾನದ ಮೂಲಕ ನಮ್ಮ ಹಕ್ಕುಗಳನ್ನು ರಕ್ಷಿಸುವ ಸರ್ಕಾರವನ್ನು ರೂಪಿಸಲು ಆದ್ಯತೆ ನೀಡಬೇಕು ಎಂದರು.

ಕುಲಸಚಿವ ಡಾ. ಯು.ಎಸ್. ಮಹಾಬಲೇಶ್ವರ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಸತ್ಯನಿಷ್ಠೆ ಪ್ರಾಮಾಣಿಕತೆ ಮೈಗೂಡಿಸಿಕೊಂಡು, ದೇಶದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು. ಡಾ.ಅಂಬೇಡ್ಕರ್ ಬದುಕು, ಮೌಲ್ಯ, ಸಂದೇಶಗಳನ್ನು ಪ್ರೇರಣೆಯಾಗಿ ಸ್ವೀಕರಿಸಿ, ಮಾರ್ಗದರ್ಶಕ ಸೂತ್ರವಾಗಿ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ಅಭಿವೃದ್ಧಿ ಘಟಕದ ಸಂಚಾಲಕ ಡಾ. ಎಂ.ಎಚ್. ನಿರಂಜನ್, ಡೀನ್ ಪ್ರೊ. ಆರ್.ಶಶಿಧರ್, ಐಕ್ಯೂಎಸಿ ನಿರ್ದೇಶಕ ಪ್ರೊ.ಗೋವಿಂದಪ್ಪ ಇತರರು ಇದ್ದರು.

- - - -6ಕೆಡಿವಿಜಿ31.ಜೆಪಿಜಿ:

ದಾವಣಗೆರೆ ವಿ.ವಿ.ಯಲ್ಲಿ ಡಾ.ಅಂಬೇಡ್ಕರ್ 68ನೇ ಪರಿನಿರ್ವಾಣ ದಿವಸ ಕಾರ್ಯಕ್ರಮದಲ್ಲಿ ಗಣ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಮಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ