ಅಂಬಿಗರ ಚೌಡಯ್ಯ ವಚನಗಳು ಬದುಕಿಗೆ ದಾರಿದೀಪ: ಸಂಸದೆ

KannadaprabhaNewsNetwork |  
Published : Jun 21, 2025, 12:49 AM IST
20ಕೆಡಿವಿಜಿ6-ದಾವಣಗೆರೆಯಲ್ಲಿ ಶುಕ್ರವಾರ ಜಿಲ್ಲಾ ಗಂಗಾಮತಸ್ಥರ(ಬೆಸ್ತರ) ಸಂಘ ಹಾಗೂ ಶ್ರೀ ಗಂಗಾ ಪರಮೇಶ್ವರಿ ಜಯಂತ್ಯೋತ್ಸವ ಸಮಿತಿ ಹಳೆಪೇಟೆಯಿಂದ ಹಮ್ಮಿಕೊಂಡಿದ್ದ ಶ್ರೀ ಗಂಗಾ ಪರಮೇಶ್ವರಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. | Kannada Prabha

ಸಾರಾಂಶ

ಶಿವಶರಣ ಅಂಬಿಗರ ಚೌಡಯ್ಯ ಅವರ ವಚನಗಳು ಜನರ ಬದುಕಿಗೆ ದಾರಿದೀಪವಾಗಿವೆ. ಕೀಳರಿಮೆಯನ್ನು ಬಿಟ್ಟು, ಮಹಿಳೆಯರು ಸ್ವಾವಲಂಬನೆಗೆ ಮಹತ್ವ ನೀಡುವ ಮೂಲಕ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳ ಮೂಲಕ ಬಾಳಿನ ಬಲವರ್ಧನೆಗೆ ಶ್ರಮಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಶಿವಶರಣ ಅಂಬಿಗರ ಚೌಡಯ್ಯ ಅವರ ವಚನಗಳು ಜನರ ಬದುಕಿಗೆ ದಾರಿದೀಪವಾಗಿವೆ. ಕೀಳರಿಮೆಯನ್ನು ಬಿಟ್ಟು, ಮಹಿಳೆಯರು ಸ್ವಾವಲಂಬನೆಗೆ ಮಹತ್ವ ನೀಡುವ ಮೂಲಕ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳ ಮೂಲಕ ಬಾಳಿನ ಬಲವರ್ಧನೆಗೆ ಶ್ರಮಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ನಗರದ ಶ್ರೀ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜಿಲ್ಲಾ ಗಂಗಾಮತಸ್ಥರ (ಬೆಸ್ತರ) ಸಂಘ ಹಾಗೂ ಹಳೇಪೇಟೆಯ ಶ್ರೀ ಗಂಗಾ ಪರಮೇಶ್ವರಿ ಜಯಂತ್ಯುತ್ಸವ ಸಮಿತಿ ಹಮ್ಮಿಕೊಂಡಿದ್ದ ಶ್ರೀ ಗಂಗಾ ಪರಮೇಶ್ವರಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದುಡಿಮೆಯಲ್ಲಿ ಕಠಿಣ ಪರಿಶ್ರಮ- ಪ್ರಾಮಾಣಿಕತೆ ಇದ್ದರೆ ಯಶಸ್ಸು ಸಾಧ್ಯ. ಗಂಗಾ ಮಾತೆಯನ್ನು ಪೂಜಿಸಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ. ಯುವಶಕ್ತಿಯನ್ನು ಪ್ರೋತ್ಸಾಹಿಸಿ, ನಾಯಕತ್ವ ಬೆಳೆಸಲು ಸಹಕಾರ ನೀಡುವ ಅವಶ್ಯಕತೆ ಇದೆ. ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಪ್ರಬಲರಾಗಬೇಕು. ಆಗ ಮಾತ್ರ ಮುನ್ನೆಲೆಗೆ ಬರಲು ಸಾಧ್ಯ. ಮಾನವೀಯ ಮೌಲ್ಯ ಕ್ಷೀಣಿಸುಲ ಕಾಲದಲ್ಲಿ ಧಾರ್ಮಿಕ ಜಾಗೃತಿಯ ಅಗತ್ಯವಿದೆ. ಸಂತೃಪ್ತ, ಸಮೃದ್ಧ ಬುದುಕಿಗೆ ನಿಜವಾದ ಧರ್ಮಾಚರಣೆ ಮುಖ್ಯ. ಈ ನಿಟ್ಟಿನಲ್ಲಿ ಶ್ರೀ ಗಂಗಾ ಪರಮೇಶ್ವರಿ ಜಯಂತ್ಯುತ್ಸವ ಮಾದರಿ ಕಾರ್ಯವಾಗಿದೆ ಎಂದು ಸಂಸದರು ಹೇಳಿದರು.

ಸಂಘದ ಜಿಲ್ಲಾಧ್ಯಕ್ಷ ಮಾಗಾನಹಳ್ಳಿ ಬಿ.ಕೆ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಉಮೇಶ ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷ ಲಿಂಗರಾಜು ಹಾವನೂರು, ಗಂಗಾಮತ ನೌಕರ ಸಂಘದ ಅಧ್ಯಕ್ಷ ಮಹಾಂತೇಶ ನಿಟ್ಟೂರು, ಸಂಘದ ಪದಾಧಿಕಾರಿಗಳು, ಮುಖಂಡರು, ಸಮಾಜ ಬಾಂಧವರು, ಮಹಿಳೆಯರು ಪಾಲ್ಗೊಂಡಿದ್ದರು.

- - -

-20ಕೆಡಿವಿಜಿ6: ಶ್ರೀ ಗಂಗಾಪರಮೇಶ್ವರಿ ಜಯಂತ್ಯುತ್ಸವ ಕಾರ್ಯಕ್ರಮವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ