ವಕ್ಫ್ ಬೋರ್ಡ್‌ನಿಂದ ಆ್ಯಂಬುಲೆನ್ಸ್‌ ಕೊಡುಗೆ

KannadaprabhaNewsNetwork |  
Published : Dec 01, 2024, 01:32 AM IST
30ಕೆಆರ್ ಎಂಎನ್ 4.ಜೆಪಿಜಿರಾಮನಗರದಲ್ಲಿ ಆಂಬ್ಯುಲೆನ್ಸ್ ಗೆ ಶಾಸಕ ಎಚ್.ಎ.ಇಕ್ಬಾಲ್‌ಹುಸೇನ್ ಶನಿವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. | Kannada Prabha

ಸಾರಾಂಶ

ರಾಮನಗರ: ನನ್ನ ಮನವಿಗೆ ಸಚಿವರು ಸ್ಪಂದಿಸಿ ರಾಮನಗರಕ್ಕೆ ವಸತಿ ಹಾಗೂ ವಕ್ಫ್ ನಿಂದ, ಅಲ್ಪಸಂಖ್ಯಾತರು ಹೆಚ್ಚು ವಾಸಿಸುತ್ತಿರುವ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್‌ಅಹಮದ್ ಅವರು ಸುಸಜ್ಜಿತ ಆ್ಯಂಬುಲೆನ್ಸ್‌ ನೀಡಿದ್ದಾರೆ ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದರು.

ರಾಮನಗರ: ನನ್ನ ಮನವಿಗೆ ಸಚಿವರು ಸ್ಪಂದಿಸಿ ರಾಮನಗರಕ್ಕೆ ವಸತಿ ಹಾಗೂ ವಕ್ಫ್ ನಿಂದ, ಅಲ್ಪಸಂಖ್ಯಾತರು ಹೆಚ್ಚು ವಾಸಿಸುತ್ತಿರುವ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್‌ಅಹಮದ್ ಅವರು ಸುಸಜ್ಜಿತ ಆ್ಯಂಬುಲೆನ್ಸ್‌ ನೀಡಿದ್ದಾರೆ ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದರು.

ಜಿಲ್ಲಾ ಕೇಂದ್ರ ರಾಮನಗರಕ್ಕೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಬೋರ್ಡ್ ವತಿಯಿಂದ 39 ಲಕ್ಷ ರು. ವೆಚ್ಚದಲ್ಲಿ ನೀಡಿರುವ ಸುಸಜ್ಜಿತ ನೂತನ ಆ್ಯಂಬುಲೆನ್ಸ್‌ಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಮಾತನಾಡಿದ ಅವರು, ರಾಮನಗರದಲ್ಲಿ ಅಂಜುಮನ್ ಇಮಾಯತ್ ಉಲ್ ಇಸ್ಲಾಂ ಟ್ರಸ್ಟ್ ಅವರಿಗೆ ಆ್ಯಂಬುಲೆನ್ಸ್‌ ಹೊಣೆ ನೀಡಿದ್ದು ಅದರ ನಿರ್ವಹಣೆ ಮಾಡಲಿದ್ದಾರೆ. ಸಚಿವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ರೋಗಿಗಳಿಗೆ ಆ್ಯಂಬುಲೆನ್ಸ್‌ನಲ್ಲಿ ಅಗತ್ಯವಾಗಿಬೇಕಾದ ವೆಂಟಿಲೇಟರ್ ವ್ಯವಸ್ಥೆ ಸೇರಿದಂತೆ ಎಲ್ಲ ಆರೋಗ್ಯ ಸೌಲಭ್ಯಗಳನ್ನು ಹೊಂದಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ದಿಗೆ ನೀಡಿದ್ದ 20 ಕೋಟಿ ವಿಶೇಷ ಅನುದಾನ ಪ್ರತಿ ಗ್ರಾಮ ಪಂಚಾಯಿತಿಗೆ 1 ಕೋಟಿಯಂತೆ 20 ಗ್ರಾಪಂಗಳಿಗೆ ಹಂಚಲಾಗಿದೆ. 162 ಕೋಟಿ ರು. ವೆಚ್ಚದಲ್ಲಿ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ಆಗಿದೆ. ಎಡ ಮತ್ತು ಬಲಭಾಗದ ಜಮೀನು ಭೂ ಸ್ವಾಧೀನಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣದ ಜನರಿಗೆ ದಿನದ 24 ಗಂಟೆಗಳ ಕುಡಿಯುವ ನೀರು ಸರಬರಾಜು ಯೋಜನೆ ಕಾರ್ಯಗತ ವಾಗುತ್ತಿದ್ದು, ಒಟ್ಟಾರೆ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಕಾರ ನೀಡಿ ಶಕ್ತಿ ತುಂಬಿದ್ದಾರೆ ಎಂದು ತಿಳಿಸಿದರು.

200 ಕೋಟಿ ಅನುದಾನಕ್ಕೆ ಮನವಿ :

ರಾಮನಗರ ಕ್ಷೇತ್ರದ ಮತ್ತಷ್ಟು ಅಭಿವೃದ್ದಿ ಕೆಲಸ ಮಾಡಲು ಗ್ರಾಮಾಂತರ ಪ್ರದೇಶಕ್ಕೆ 100 ಕೋಟಿ ಮತ್ತು ಪಟ್ಟಣ ಅಭಿವೃದ್ಧಿಗೆ 100 ಕೋಟಿ ಅನುದಾನದ ಅಗತ್ಯವಿದೆ. 200 ಕೋಟಿ ರು. ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದೇನೆ. ಅಧಿವೇಶನ ಮುಗಿದ ನಂತರ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ರಾಮನಗರ ಕ್ಷೇತ್ರದ ಕಸಬಾ ಮತ್ತು ಕೈಲಂಚಾ ಹೋಬಳಿಗಳಿಗೆ 40 ಕೋಟಿ ರು. ಹಾಗೂ ಹಾರೋಹಳ್ಳಿ-ಮರಳವಾಡಿ ಹೋಬಳಿಗಳಿಗೆ 40 ಕೋಟಿ ಒಟ್ಟು 80 ಕೋಟಿ ವಿಶೇಷ ಅನುದಾನ ನೀಡಿದ್ದು, ಕಾವೇರಿ ನೀರಾವರಿ ನಿಗಮದ ಮೂಲಕ ಅನುಷ್ಟಾನ ಮಾಡಲಾಗುತ್ತಿದೆ ಎಂದರು.

ಹೊಸ ವರ್ಷಕ್ಕೆ ನಾಲೆಗಳಿಗೆ ನೀರು:

ಕಳೆದ ಮೂವತ್ತು ವರ್ಷಗಳಿಂದ ಮಂಚನಬೆಲೆ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡಲು ಇಲ್ಲಿ ಆಯ್ಕೆಯಾದವರಿಗೆ ಇಚ್ಚಾಶಕ್ತಿ ಇರಲಿಲ್ಲ. ನಾನು ಶಾಸಕನಾದ ತಕ್ಷಣ ರೈತರ ಕೃಷಿಗೆ ನೆರವಾಗಲು ಎರಡು ಕಡೆ ನಾಲೆಗಳಿಗೆ ನೀರು ಹಾಯಿಸಲು ಖುದ್ದಾಗಿ ನಾಲೆಗಳ ಪರಿಸ್ಥಿತಿ ಅವಲೋಕನ ಮಾಡಿ ಮೊದಲ ಹಂತದಲ್ಲಿ 20 ಕಿ.ಮೀ ದೂರ ಎಡ ಮತ್ತು ಬಲದಂಡೆ ನಾಲೆಗಳನ್ನು ಸುಚಿಗೊಳಿಸಲಾಗುತ್ತಿದೆ. ಆ ಕಾರ್ಯ ಡಿಸೆಂಬರ್ ಅಂತ್ಯಕ್ಕೆ ಮುಗಿದು ಜನವರಿ ಹೊಸ ವರ್ಷಾರಂಭಕ್ಕೆ ನಾಲೆಗಳಿಗೆ ನೀರು ಹಾಯಿಸಲಾಗುವುದು ಎಂದು ರೈತರಿಗೆ ಸಿಹಿ ಸುದ್ದಿ ನೀಡಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಚೇತನ್‌ಕುಮಾರ್, ಬಿಳಗುಂಬ ಗ್ರಾಪಂ ಅಧ್ಯಕ್ಷ ನವೀನ್‌ಗೌಡ, ಮಾಯಗಾನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಎಚ್.ರಂಜಿತ್, ನಗರಸಭೆ ಸದಸ್ಯರಾದ ಅಜ್ಮತ್, ನಿಜಾಂಮುದ್ದೀನ್ ಷರೀಪ್, ಆಯಿಷಾ, ಆರೀಪ್, ಅಕ್ಲೀಂ, ಪೈರೋಜ್‌ಪಾಷ, ಮೊಹಿನ್‌ಖುರೇಶಿ, ಮುಖಂಡರಾದ ಅನಿಲ್ ಜೋಗೇಂದರ್, ಅತಾವುಲ್ಲಾ, ಗುರುವಯ್ಯ ಇತರರು ಹಾಜರಿದ್ದರು.

30ಕೆಆರ್ ಎಂಎನ್ 4.ಜೆಪಿಜಿ

ರಾಮನಗರದಲ್ಲಿ ಆ್ಯಂಬುಲೆನ್ಸ್‌ಗೆ ಶಾಸಕ ಇಕ್ಬಾಲ್‌ಹುಸೇನ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!