ಆಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ವಯೋ ನಿವೃತ್ತಿ: ಬೀಳ್ಕೊಡುಗೆ

KannadaprabhaNewsNetwork |  
Published : Feb 24, 2025, 12:31 AM IST
ಬೀಳ್ಕೊಡುಗೆ | Kannada Prabha

ಸಾರಾಂಶ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆಯಿತು.

ಕನ್ನಡಪ್ರಬ ವಾರ್ತೆ ಬೆಳ್ತಂಗಡಿ

ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ತಾ. ಆರೋಗ್ಯಾಧಿಕಾರಿ ಡಾ‌. ಸಂಜತ್, ನಿವೃತ್ತ ತಾ. ಆರೋಗ್ಯಾಧಿಕಾರಿ ಡಾ.‌ಕಲಾಮಧು ಶೆಟ್ಟಿ, ಬಂಟ್ವಾಳ ಮತ್ತು ಸುಳ್ಯದ ತಾಲೂಕು ಆರೋಗ್ಯಾಧಿಕಾರಿ ಭಾಗವಹಿಸಿ ನಿವೃತ್ತರ ಸೇವೆಯ ಬಗ್ಗೆ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿ, ಎಲ್ಲಾ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭ ಅಬ್ದುಲ್ ರಝಾಕ್ ಅವರ ವೃತ್ತಿ ಬದುಕಿನಲ್ಲಿ ಅವರ ಸೌಮ್ಯ ಸ್ವಭಾವ, ಕರ್ತವ್ಯ ನಿಷ್ಠೆ, ಸಮಯಪ್ರಜ್ಞೆ, ಅಪಘಾತ ರಹಿತ ಉತ್ತಮ ಚಾಲನೆಯ ಸೇವೆಯನ್ನು ಪ್ರಶಂಸಿಸಿ ಶಾಲು, ಫಲಪುಷ್ಪ ನೀಡಿ ದಂಪತಿ ಸಮೇತ ಗೌರವಿಸಲಾಯಿತು.

ಅಜಯ್ ಕಲ್ಲೇಗ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!