ವಿಬಿ-ಜಿ-ರಾಮ್‌-ಜಿ ಕೂಲಿಕಾರರಿಗೆ ವಿಫುಲ ಅವಕಾಶ

KannadaprabhaNewsNetwork |  
Published : Jul 12, 2026, 03:00 AM IST
ಬೆಂ.ಗ್ರಾ ಜಿಲ್ಲೆಯ ರೈತರೊಂದಿಗೆ ಸಂವಾದದಲ್ಲಿ ಸಿಇಓ. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಪುರಸ್ಕೃತ ಹೊಸ ಯೋಜನೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್(ವಿಬಿ ಜಿ- ರಾಮ್‌ ಜಿ) ಇದೇ ಜುಲೈ 1ರಿಂದ ಜಾರಿಗೆ ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಡಾ.ವಾಸಂತಿ ಅಮರ್ ತಿಳಿಸಿದ್ದಾರೆ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಪುರಸ್ಕೃತ ಹೊಸ ಯೋಜನೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್(ವಿಬಿ ಜಿ- ರಾಮ್‌ ಜಿ) ಇದೇ ಜುಲೈ 1ರಿಂದ ಜಾರಿಗೆ ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಡಾ.ವಾಸಂತಿ ಅಮರ್ ತಿಳಿಸಿದ್ದಾರೆ.

ಅರ್ಹ ಗ್ರಾಮೀಣ ಕುಟುಂಬಕ್ಕೆ ಇನ್ನು ಮುಂದೆ 100 ದಿನಗಳ ಬದಲಾಗಿ 125 ಮಾನವ ದಿನಗಳ ಕಡ್ಡಾಯ ಉದ್ಯೋಗ ಅವಕಾಶ ಕಲ್ಪಿಸುವ ಜೊತೆಗೆ ಗ್ರಾಮೀಣ ಪ್ರದೇಶದ ಸಮಗ್ರ ಮತ್ತು ಸ್ಯಾಚುರೇಷನ್ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ), ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಸಿಇಎ ಡಾ.ವಾಸಂತ ಅಮರ್‌ ಕನ್ನಡಪ್ರಭಕ್ಕೆ ಮಾಹಿತಿ ನೀಡಿದ್ದಾರೆ.

ವಿಬಿ-ಜಿ ರಾಮ್-ಜಿ ಯೋಜನೆಯಡಿ ದಿನಗೂಲಿಯನ್ನು ₹370ರಿಂದ ₹382ಕ್ಕೆ ಏರಿಕೆ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಜಂಟಿಯಾಗಿ ಆದೇಶ ಹೊರಡಿಸಿದ್ದು, ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ಮುಂದುವರೆಯಲಿದೆ. ಕೂಲಿ ಹಣವನ್ನು ಗರಿಷ್ಠ 15 ದಿನಗಳ ಒಳಗಾಗಿ ಕೂಲಿಕಾರರ ಬ್ಯಾಂಕ್ ಖಾತೆಗಳಿಗೆ ಕಡ್ಡಾಯವಾಗಿ ಜಮೆ ಮಾಡಬೇಕು. ವಿಳಂಬವಾದರೆ ದಂಡದ ರೂಪದಲ್ಲಿ ಪರಿಹಾರ ನೀಡಬೇಕಾಗುತ್ತದೆ. ಇಲ್ಲಿವರೆಗೂ ಮನರೇಗಾ ಯೋಜನೆಯಡಿ ನೀಡಿದ್ದ ಉದ್ಯೋಗ ಚೀಟಿಗಳನ್ನೆ ಮಾನ್ಯ ಮಾಡಿ, ಆಸಕ್ತರಿಗೆ ಕೆಲಸ ಒದಗಿಸಲು ಅವಕಾಶ ಕಲಿಸಲಾಗಿದೆ. ಜೂನ್ 30ರವರೆಗೆ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಕಾಮಗಾರಿಗಳಲ್ಲಿ ವಿಬಿ -ಜಿ ರಾಮ್- ಜಿ ಯೋಜನೆ ನಿಯಮಕ್ಕೆ ಒಳಪಟ್ಟ ಕಾಮಗಾರಿಗಳನ್ನು ತಡೆರಹಿತ ಮುಂದುವರೆಲಾಗುವುದು.

ಜಿಲ್ಲೆಯಲ್ಲಿ ಶೇ.99.89 ಸಕ್ರಿಯ ಕೂಲಿಕಾರರ ಇ-ಕೆವೈಸಿ:

ಗ್ರಾಮೀಣಾಭಿವೃದ್ಧಿ ಮಾರ್ಗಸೂಚಿಯಂತೆ ನೋಂದಾಯಿತ ಎಲ್ಲ ಕೂಲಿಕಾರರ ಇ- ಕೆವೈಸಿ ಮಾಡಿಸುವಲ್ಲಿ ಜಿಲ್ಲೆಯು ಶೇ.99.89ರಷ್ಟು ಸಕ್ರಿಯ ಕೂಲಿಕಾರರ ಇ-ಕೆವೈಸಿಯನ್ನು ಈಗಾಗಲೇ ಕೈಗೊಳ್ಳಲಾಗಿದೆ. ಅದೇ ರೀತಿ ಶೇ.86.54ರಷ್ಟು ನೋಂದಾಯಿತ ಎಲ್ಲ ಕೂಲಿಕಾರರ ಇ-ಕೆವೈಸಿಯನ್ನು ಕೂಡ ಕೈಗೊಳ್ಳಲಾಗಿದೆ. ವಲಸೆ ಹಾಗೂ ತಾಂತ್ರಿಕ ಕಾರಣದಿಂದ ಕೆಲವು ಕೂಲಿಕಾರರ ಇ-ಕೆವೈಸಿ ಬಾಕಿ ಇದ್ದು, ಅದಕ್ಕೂ ಕ್ರಮವಹಿಸಲಾಗುತ್ತಿದೆ ಎಂದರು.

4 ವಿಷಯಯಾಧಾರಿತ ಕಾರ್ಯ ವರ್ಗ:

ಹೊಸ ಯೋಜನೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ಯೋಜನೆಯಲ್ಲಿ ಮುಖ್ಯವಾಗಿ 4 ವಿಷಯಾಧಾರಿತ ಕಾರ್ಯವರ್ಗಗಳ ಅಡಿಯಲ್ಲಿ ಅನುಷ್ಠಾನಗೊಳ್ಳುತ್ತಿದೆ. ಜಲ ಭದ್ರತಾ ಕಾರ್ಯಗಳು, ಗ್ರಾಮೀಣ ಮೂಲಸೌಕರ್ಯ, ಜೀವನೋಪಾಯ ಸಂಬಂಧಿತ ಮೂಲಸೌಕರ್ಯ, ತೀವ್ರ ಹವಾಮಾನ ಮತ್ತು ವಿಪತ್ತು ಶಮನ ಕಾರ್ಯಗಳು ಸೇರಿವೆ.

ವಿಜಿಪಿಪಿ ಚಟುವಟಿಕೆಗಳ ಗ್ರಾಪಂ ಮಟ್ಟದ ಯೋಜನೆಯನ್ನು ಸುಗಮಗೊಳಿಸಲು ಉದ್ದೇಶಿಸಲಾದ ಜಿಯೋಸ್ಪೇಷಿಯಲ್ ಯೋಜನಾ ಪೋರ್ಟಲ್ ಆಗಿದೆ. ಮುಕ್ತ ಮೂಲ ಜಿಐಎಸ್ ಪರಿಕರಗಳನ್ನು ಬಳಸಿಕೊಂಡು ಯೋಜನೆಗೆ ಸಮಗ್ರ ವಿಧಾನವನ್ನು ಸಕ್ರಿಯಗೊಳಿಸಲು ಪೋರ್ಟಲ್ ವ್ಯಾಪಕ ಶ್ರೇಣಿಯ ಪ್ರಾದೇಶಿಕ ಮಾಹಿತಿ ವಿಷಯಗಳನ್ನು ಸಂಯೋಜಿಸುತ್ತದೆ. ವಿಜಿಪಿಪಿ ಅಡಿಯಲ್ಲಿ ರಚಿಸಲಾದ ಜಿಯೋ-ಟ್ಯಾಗಿಂಗ್ ಸ್ವತ್ತುಗಳ ಪ್ಯಾನ್ ಇಂಡಿಯನ್ ಉಪಕ್ರಮದ ನಂತರ, ಮುಂಬರುವ ಚಟುವಟಿಕೆಗಳು ಮತ್ತು ಅವುಗಳ ಸ್ಥಳಗಳನ್ನು ಗುರುತಿಸಲು ಜಿಐಎಸ್ ನ ಬಲವನ್ನು ಬಳಸಿಕೊಳ್ಳುವುದು ನೈಸರ್ಗಿಕ ಪರಿಣಾಮವಾಗಿದೆ.

9ಕೆಡಿಬಿಪಿ2- ಬೆಂ.ಗ್ರಾ ಜಿಲ್ಲೆಯ ರೈತರೊಂದಿಗೆ ಸಂವಾದದಲ್ಲಿ ಸಿಇಒ ಡಾ.ವಾಸಂತಿ ಅಮರ್‌.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕ್ ಅದಾಲತ್; ಅತ್ಯಂತ ವೇಗದ ಶಾಶ್ವತ ಪರಿಹಾರ: ನ್ಯಾಯಾಧೀಶ ಸಿದ್ದಲಿಂಗ ಪ್ರಭು
ಜನರಿಗೆ ಕಲಾಭವನ ಮುಕ್ತ ಮಾಡಲು ಹೋರಾಟ ಸಮಿತಿ