ಕನ್ನಡಪ್ರಭ ವಾರ್ತೆ ಮಾಲೂರು
ಬೆಳೆಗಳಿಗೆ ಕಾಯ್ದೆ ರೂಪಿಸಿ
ಸರ್ಕಾರಗಳು ರೈತರು ಬೆಳೆಯುವ ಬೆಳೆಗಳಿಗೆ ಕಾಯ್ದೆ ರೂಪಿಸಿ ಎಷ್ಟು ಎಕರೆ ರೈತರು ಬೆಳೆ ಬೆಳೆಯಬೇಕು ಎಂಬುದನ್ನು ನಿಗದಿಪಡಿಸಬೇಕು ಜೊತೆಗೆ ಬೆಳೆ ಪರಿಹಾರವನ್ನು ಸಹ ಒದಗಿಸಬೇಕು ಸಾಲ ಸೋಲ ಮಾಡಿ ಬೆಳೆ ಹಾಕಿದ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದೆ ನಷ್ಟವನ್ನು ಅನುಭವಿಸಿದರೆ ಅದಕ್ಕೆ ಅಧಿಕಾರಿಗಳನ್ನು ಹೊಣೆಯಾಗಿಸಬೇಕು ಎಂದರು.ನಕಲಿ ಬೀಜ, ಔಷಧ ಮಾರಾಟರಸಗೊಬ್ಬರ ಔಷಧಿ ಬಿತ್ತನೆ ಬೀಜ ಮಾರಾಟದಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಮುಲಾಜಿ ಇಲ್ಲದೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ರೈತರು ತೊಂದರೆ ಅನುಭವಿಸಬೇಕಾಗುತ್ತದೆ, ಮಾದರಿಯಾಗಿ ಕೃಷಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಿ ರೈತರಿಗೆ ಸಮರ್ಪಕವಾದ ಮಾಹಿತಿ ಒದಗಿಸಬೇಕು ಎಂದರು.ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ ರಮೇಶ್, ಮೈರಾಡ ಸಂಸ್ಥೆಯ ನಿರ್ದೇಶಕರಾದ ಶಿವಶಂಕರ್, ರಾಘವೇಂದ್ರ ಸೂಡಿ, ಮುಖಂಡರಾದ ಚನ್ನರಾಯಪ್ಪ, ವೀರಭದ್ರಪ್ಪ, ಚಂದ್ರೇಗೌಡ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ರೈತ ಮುಖಂಡರಾದ ನಿಧರಮಂಗಲ ನಾಗಪ್ಪ, ವೆಂಕಟೇಶ್, ವಿನೋದ್, ಸಂಪಂಗಿರಾಮಯ್ಯ, ನೀಲಕಂಠ ಇನ್ನಿತರವರು ಹಾಜರಿದ್ದರು.