ಕನ್ನಡಪ್ರಭ ವಾರ್ತೆ ಸೊರಬ
ಸೋಮವಾರ ಪಟ್ಟಣದ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಯುವ ಬ್ರಿಗೇಡ್ "ಬಣ್ಣದಕಲ್ಲು " ಎಂಬ ಶೀರ್ಷಿಕೆಯಡಿ ಶಿಲ್ಪಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಕಲಾವಿದರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಕಠಿಣ ಕಲ್ಲುಗಳನ್ನು ಮೃದುವಾಗಿಸುವ ಕಲೆಗಾರಿಕೆ ತಿಳಿದಿರುವುದು ಶಿಲ್ಪಿಗಳಿಗೆ ಮಾತ್ರ. ಅವರು ದೈವತ್ವ ಭಾವನೆಗೆ ದೇವರ ಅನುಗ್ರಹದಿಂದ ಶಿಲ್ಪಿಗಳ ಉಳಿಯಲ್ಲಿ ಪರಮಾತ್ಮ ಎಲ್ಲವನ್ನೂ ಈಡೇರಿಸಿಕೊಳ್ಳುತ್ತಾನೆ. ಹಾಗಾಗಿ, ಜನರ ಭಾವನೆಗಳು ದೈವತ್ವ ಕಡೆ ಹೊರಳುವುದಕ್ಕೆ ಕಲಾವಿದರು ಕಾರಣಕರ್ತರು ಎಂದರು.ಪ್ರತಿವರ್ಷ ಫೆಬ್ರವರಿಯಲ್ಲಿ ಮೈ ಲವ್ ಮೈ ನೇಷನ್ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಆಯ್ಕೆ ಮಾಡಿಕೊಂಡು ಸಮಾಜಕ್ಕೆ ಪರಿಚಯಿಸಿ, ಸನ್ಮಾನಿಸುವ ಮಹೋನ್ನತ ಕಾರ್ಯದಲ್ಲಿ ತಾಲೂಕು ಯುವ ಬ್ರಿಗೇಡ್ ಕಾಯೋನ್ಮುಖವಾಗಿದೆ. ಈ ಹಿಂದೆ ಪೌರಕಾರ್ಮಿಕರನ್ನು, ಪವರ್ಮನ್ಗಳನ್ನು, ಆಶಾ ಕಾರ್ಯಕರ್ತೆಯರನ್ನು, ಅಂಚೆ ಅಣ್ಣಂದಿರನ್ನು, ಪುರೋಹಿತರನ್ನು ಸನ್ಮಾನಿಸಿ ಗೌರವಿಸಲಾಗಿದೆ ಎಂದು ತಿಳಿಸಿದರು.
ಚಿತ್ರಕಾರರ ಬಣ್ಣ ಮತ್ತು ಶಿಲ್ಪಿಯ ಕಲ್ಲು ಸೇರಿ ಬಣ್ಣದ ಕಲ್ಲು ಎಂಬ ಹೆಸರನ್ನು ಯುವ ಬ್ರಿಗೇಡ್ ನೀಡಿದೆ ಮತ್ತು ಚಿತ್ರಕಾರನ ಕಲ್ಪನೆಯ ಮೂಸೆಯಿಂದ ಮೂಡಿದ ಆ ಕಲಾಕೃತಿ ನಮ್ಮೆಲ್ಲರ ಭಾವನೆಗಳ ಪ್ರತೀಕವೇ ಆದ್ದರಿಂದ ಆ ಭಾವನೆಯ ಬಿಂಬವನ್ನು ಮೂಡಿಸಿದ ಕಲಾಕಾರರನ್ನು ಸನ್ಮಾನಿಸಿರುವುದು ಯುವ ಬ್ರಿಗೇಡ್ನ ಹೆಚ್ಚುಗಾರಿಕೆಯಾಗಿದೆ ಎಂದು ಹೇಳಿದರು.
ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕ ಮಹೇಶ್ ಖಾರ್ವಿ, ಲೋಕೇಶ್, ಆಶಿಕ್ ನಾಗಪ್ಪ, ಸೋದರಿ ನಿವೇದಿತಾ ಪ್ರತಿಷ್ಠಾನದ ರೂಪಾ ಮಧುಕೇಶ್ವರ್, ಗುರುಕುಲ ವಿದ್ಯಾ ಸಂಸ್ಥೆಯ ಸತೀಶ್ ಬೈಂದೂರ್, ಶ್ರೇಯಸ್, ಸಂಗೀತಾ ರಾಘವೇಂದ್ರ, ರಾಜು ಆಚಾರಿ ಮೊದಲಾದವರು ಹಾಜರಿದ್ದರು.
-19ಕೆಪಿಸೊರಬ03: