ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು
ಕೆಸರುಗದ್ದೆ ಸಮಾರಂಭದಲ್ಲಿ ಜೇಸಿ ವಲಯಾಧ್ಯಕ್ಷೆ ಆಶಾ ಜೈನ್ ಮಾತನಾಡಿ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಜೇಸಿ ಸಂಸ್ಥೆಯು ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಿ ದೇಶಾಭಿಮಾನ ಮೆರೆಯುತ್ತಿರುವುದು ಸಂತಸ ತಂದಿದೆ. ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸೊಗಡಿನ ಕ್ರೀಡಾಕೂಟಗಳು ಮರೆಯಾಗುತ್ತಿದ್ದು, ಜೇಸಿ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ನಗರ ಪ್ರದೇಶದ ಜನ ಮುಂದುವರೆದ ಕ್ರೀಡೆಗಳಿಗೆ ಗಮನನೀಡುವ ಸಮಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮೀಣ ಕ್ರೀಡೆ ಆಯೋಜಿಸಿರುವುದು ಉತ್ತಮವಾಗಿದೆ ಎಂದರು.ಗ್ರಾಪಂ ಸದಸ್ಯ ಎಂ.ಎಸ್.ಅರುಣೇಶ್ ಮಾತನಾಡಿ, ಕ್ರೀಡೆಗಳು ಮಾನಸಿಕ, ದೈಹಿಕ ಸ್ಥಿರತೆಗೆ ಪೂರಕವಾಗಿದ್ದು, ಕೃಷಿಯೆಡೆಗೆ ಆಸಕ್ತಿ ಕಡಿಮೆಯಾಗುತ್ತಿರುವ ದಿನಗಳಲ್ಲಿ ಕೆಸರುಗದ್ದೆ ಆಟಗಳು ಯುವಕರಿಗೆ ಹೊಸ ಅನುಭವ ನೀಡಲಿದೆ. ಆರೋಗ್ಯದ ದೃಷ್ಟಿಯಿಂದಲೂ ಕೆಸರಿನಲ್ಲಿ ಮಿಂದೇಳುವುದು ಉತ್ತಮವಾಗಿದೆ ಎಂದರು.ಜೇಸಿ ಅಧ್ಯಕ್ಷ ಎನ್.ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಸದಾಶಿವ, ದಾನಿಗಳಾದ ಕೆ.ಕೆ.ವೆಂಕಟೇಶ್, ಸಂತೋಷ್ ಅರೆನೂರು, ಮೋಹನ್ದಾಸ್ ಹೆಗ್ಡೆ, ಪ್ರಸಾದ್ ಹೆಗ್ಡೆ, ಟಿ.ಎಂ.ಉಮೇಶ್ ಕಲ್ಮಕ್ಕಿ, ಹರೀಶ್ ಬಿಕ್ಕರಣೆ, ಎಚ್.ಎಸ್.ರವಿ, ಸುವಿಕ್ರಮ್, ಎ.ಕೆ.ಸಂದೇಶ್, ಆರ್ಧನ್, ಡಾ. ನವೀನ್ ಲಾಯ್ಡ್ ಮಿಸ್ಕಿತ್, ಜೇಸಿ ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಅಜಿತ್, ಕಾರ್ಯದರ್ಶಿ ಎಚ್.ಟಿ.ಶೃಜಿತ್, ಪ್ರಕಾಶ್ ಮುದುಗುಣಿ, ಸಿ.ವಿ.ಸುನೀಲ್ ಮತ್ತಿತರರು ಉಪಸ್ಥಿತರಿದ್ದರು.ವಿಜೇತರು: ಹಗ್ಗಜಗ್ಗಾಟ- ಹೂವಿನಹಕ್ಲು ತಂಡ (ಪ್ರಥಮ), ಚೆಂಕಿ ಚಡಲ್ಸ್ (ದ್ವಿತೀಯ), ವಾಲಿಬಾಲ್- ಸಂಗಮ್ ಫ್ರೆಂಡ್ಸ್ ಎ ತಂಡ ಉಜಿರೆ (ಪ್ರಥಮ), ಸಂಗಮ್ ಫ್ರೆಂಡ್ಸ್ ಬಿ ತಂಡ (ದ್ವಿತೀಯ), ಕ್ರಿಕೆಟ್- ಎ.ಕೆ.ಸ್ಪೋರ್ಟ್ಸ್ (ಪ್ರಥಮ), ಯುನೈಟೆಡ್ ಭದ್ರಾ (ದ್ವಿತೀಯ), ಕೆಸರುಗದ್ದೆ ಓಟ- ಮುರುಳಿ ಪುತ್ತೂರು (ಪ್ರಥಮ), ಶರತ್ ಕಟ್ಟೇಮನೆ (ದ್ವಿತೀಯ), ಸುಮಂತ್ (ತೃತೀಯ) ಸ್ಥಾನ ಪಡೆದರು. ವಿಜೇತರಿಗೆ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಯಿತು.