ಗುತ್ತಿಗೆದಾರರಿಂದ ಅಹೋರಾತ್ರಿ ಧರಣಿ ಆರಂಭ

KannadaprabhaNewsNetwork |  
Published : Jun 23, 2024, 02:03 AM IST
22 ಆಲಮಟ್ಟಿ 1: ಆಲಮಟ್ಟಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾ ತೀರ ಗುತ್ತಿಗೆದಾರರ ಸಂಘ ಕಳೆದ ಮೂರು ದಿನಗಳಿಂದ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಆರಂಭಿಸಿದ್ದ ಧರಣಿ ಸತ್ಯಾಗ್ರಹ ಶನಿವಾರದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವಾಗಿ ಪರಿವರ್ತನೆಗೊಂಡಿತು. | Kannada Prabha

ಸಾರಾಂಶ

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾ ತೀರ ಗುತ್ತಿಗೆದಾರರ ಸಂಘ ಕಳೆದ ಮೂರು ದಿನಗಳಿಂದ ಮುಖ್ಯ ಎಂಜಿನಿಯರ್ ಕಚೇರಿ ಎದುರು ಆರಂಭಿಸಿದ್ದ ಧರಣಿ ಸತ್ಯಾಗ್ರಹ ಶನಿವಾರದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವಾಗಿ ಪರಿವರ್ತನೆಗೊಂಡಿತು.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾ ತೀರ ಗುತ್ತಿಗೆದಾರರ ಸಂಘ ಕಳೆದ ಮೂರು ದಿನಗಳಿಂದ ಮುಖ್ಯ ಎಂಜಿನಿಯರ್ ಕಚೇರಿ ಎದುರು ಆರಂಭಿಸಿದ್ದ ಧರಣಿ ಸತ್ಯಾಗ್ರಹ ಶನಿವಾರದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವಾಗಿ ಪರಿವರ್ತನೆಗೊಂಡಿತು.

ಕೆಬಿಜೆಎನ್ಎಲ್‌ನಲ್ಲಿ ಕಳೆದ ವರ್ಷ ಕರೆದಿದ್ದ ಕಾಮಗಾರಿಗಳ ಟೆಂಡರ್ ತೆರೆದು ಕಾಮಗಾರಿ ಆದೇಶ ನೀಡಿಲ್ಲ. ಆಗ ಟೆಂಡರ್ ಜತೆ ನೀಡಿದ್ದ ಇಎಂಡಿ ಹಣವನ್ನು ಪಾವತಿಸಿಲ್ಲ. ಹೀಗಾಗಿ ನೂರಾರು ಗುತ್ತಿಗೆದಾರರ ಕೋಟ್ಯಂತರ ಹಣ ಇಎಂಡಿ ರೂಪದಲ್ಲಿ ನಿಗಮದಲ್ಲಿದೆ. ಇಎಂಡಿ ಹಣ ಮರಳಿಸಬೇಕು. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಬೇಕು ಎಂದು ಗುತ್ತಿಗೆದಾರರು ಆಗ್ರಹಿಸಿದರು.

ಮೊದಲು ಧರಣಿ ಸತ್ಯಾಗ್ರಹ ನಡೆಸಿದ್ದೇವೆ. ಈಗ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ. ಇದಕ್ಕೂ ಕೆಬಿಜೆಎನ್ಎಲ್ ಅಧಿಕಾರಿಗಳು ಸ್ಪಂದಿಸದಿದ್ದರೇ ಜೂನ್ 25 ರಂದು ಮುಖ್ಯ ಎಂಜಿನಿಯರ್ ಕಚೇರಿಗೆ ಬೀಗ ಜಡಿಯಲಾಗುವುದು ಎಂದು ಸಂಘದ ಅಧ್ಯಕ್ಷ ಎಂ.ಎ. ಮೇಟಿ ಹೇಳಿದರು.

ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಮಹಾಂತೇಶ ಬೆಳಗಲ್ಲ, ಎಂ.ಆರ್. ಕಮತಗಿ, ಬಸವರಾಜ ದಂಡಿನ, ಚಂದ್ರಶೇಖರ ಪಳನಿ, ಮಂಜುನಾಥ, ಸತೀಶ ಪಾಟೀಲ, ರಾಘು ಪತ್ತಾರ, ಯಾಕೂಬ್ ಮುದ್ನಾಳ, ಚನ್ನಬಸು ಅಂಗಡಿ, ಸಲೀಂ ಮೇಲಿನಮನಿ, ಸುನಿಲಗೌಡ ಪಾಟೀಲ, ಸಂತೋಷ ಮರಡಿ, ಎಂ.ಡಿ. ಯುಸೂಫ್, ಬಿ.ಪಿ. ರಾಠೋಡ, ಎಚ್.ಜಿ. ಯಂಡಿಗೇರಿ, ಟಿ.ಎಸ್. ಅಫಜಲಪುರ, ಮಹಾಂತೇಶ ಡೆಂಗಿ, ಮಹಾಂತೇಶ ಬಿಜಾಪುರ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಐಎಸ್‌ ಅಂತಿಮ ಮಹಾ ಯೋಜನೆಗೆ ಅನುಮೋದನೆ ಸಲ್ಲಿಸಿ
ರೈತರ ಹಿತ ಕಾಯುವುದೇ ನನ್ನ ಗುರಿ: ಡಿ.ಕೆ.ಸುರೇಶ್