ಹಕ್ಕು ಪತ್ರ ನೀಡದಿದ್ದರೆ ಅಹೋರಾತ್ರಿ ಧರಣಿ

KannadaprabhaNewsNetwork |  
Published : Sep 02, 2024, 02:06 AM IST
1ಕೆಆರ್ ಎಂಎನ್ 4.ಜೆಪಿಜಿಹಾರೋಹಳ್ಳಿ ತಾಲೂಕು ಕಚೇರಿ ಎದುರು ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಜಗ್ಗು ಸುದ್ದಿಗಾರರೊಂದಿಗೆ ಮಾತನಾಡಿದರು. | Kannada Prabha

ಸಾರಾಂಶ

ಹಕ್ಕು ಪತ್ರ ನೀಡದಿದ್ದರೆ ಅಹೋರಾತ್ರಿ ಧರಣಿ

ಕನ್ನಡಪ್ರಭ ವಾರ್ತೆ ಹಾರೋಹಳ್ಳಿ

ಅರಣ್ಯ ಪ್ರದೇಶದ ಭೂತನಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿರುವ ಹಕ್ಕಿಪಿಕ್ಕಿ ಮತ್ತು ಇರುಳಿಗ ಜನಾಂಗದ 48 ಮಂದಿಗೆ ಕೂಡಲೇ ಹಕ್ಕು ಪತ್ರ ನೀಡದಿದ್ದರೆ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಜಗ್ಗು ಎಚ್ಚರಿಸಿದರು.

ತಾಲೂಕು ಕಚೇರಿ ಎದುರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭೂತನಹಳ್ಳಿ ಗ್ರಾಮದಲ್ಲಿ ಹಕ್ಕಿಪಿಕ್ಕಿ ಮತ್ತು ಇರುಳಿಗ ಜನಾಂಗದವರು ಹಲವಾರು ವರ್ಷಗಳಿಂದಲೂ ವಾಸಿಸುತ್ತಿದ್ದೇವೆ. ವಸತಿಗಾಗಿ ಸರ್ಕಾರ 350 ಎಕರೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಿದೆ. ಹೀಗಿದ್ದರೂ ಹಲವಾರು ಫಲಾನುವಿಗಳಿಗೆ ಹಕ್ಕುಪತ್ರ ನೀಡದೇ ತಾಲೂಕು ಆಡಳಿತ ಸತಾಯಿಸುತ್ತಿದೆ ಎಂದು ದೂರಿದರು.

ಭೂತನಹಳ್ಳಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ತಾಲೂಕು ಆಡಳಿತ 114 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಿದ್ದು, ಉಳಿದ ಜನರಿಗೂ ಹಕ್ಕುಪತ್ರ ವಿತರಿಸುವಂತೆ ಮನವಿ ಮಾಡಲಾಗಿದೆ. ಆದರೆ, ತಾಲ್ಲೂಕು ಆಡಳಿತ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರಾದ ವಿಷ್ಣು, ವಿಜಯ್, ಗೋಪಿ, ರಾಜ್ಯ ಪದಾಧಿಕಾರಿಗಳಾದ ಹೆಗನ್, ಮಲ್ಲಶೆಟ್ಟಿ, ಗುರುವಯ್ಯ, ಸಾಗರ್, ಸಂಜೀವಯ್ಯ ಸೇರಿದಂತೆ ಅನೇಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ