ಯಲಬುರ್ಗಾ: ತಳಮಟ್ಟದ ಸಂಘಟನೆ, ಶಿಸ್ತು ಹಾಗೂ ತತ್ವನಿಷ್ಠ ಕಾರ್ಯಕರ್ತರ ಪಡೆ ಇದ್ದುದಕ್ಕೆ ಕ್ಷೇತ್ರದಲ್ಲಿ ಬಿಜೆಪಿ ಅತ್ಯಂತ ದೊಡ್ಡ ಬಲವಾಗಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಪಕ್ಷದ ಬಲ ಕಾರ್ಯಕರ್ತರಲ್ಲಿದೆ. ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಬೂತ್ ವ್ಯಾಪ್ತಿಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಸಂಘಟನೆ ಇನ್ನಷ್ಟು ಬಲಿಷ್ಠವಾಗಲಿದೆ. ಕಾರ್ಯಕರ್ತರ ತ್ಯಾಗ ಮತ್ತು ಶ್ರಮವನ್ನು ಎಂದಿಗೂ ಮರೆಯಲಾಗದು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ. ಮಹೇಶ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಶ್ರಮ ಗುರುತಿಸಿ ಪ್ರೋತ್ಸಾಹಿಸುವ ಪಕ್ಷವಾಗಿದೆ. ಬೂತ್ ಮಟ್ಟದ ಕಾರ್ಯಪದ್ಧತಿ ಗಟ್ಟಿಯಾಗಿದ್ದರೆ ಮಾತ್ರ ಚುನಾವಣಾ ಯಶಸ್ಸು ಸಾಧ್ಯ. ಪ್ರತಿಯೊಬ್ಬ ಬಿಎಲ್ಎ-2 ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.ಬಿಜೆಪಿ ಮುಖಂಡರಾದ ಸಂತೋಷ ರಾಜಗುರು, ಸುನೀಲ ಹೆಸರೂರು ಕಾರ್ಯಾಗಾರದ ಉದ್ದೇಶವನ್ನು ವಿವರಿಸಿ, ಸಂಘಟನಾ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.ಪ್ರಮುಖರಾದ ಬಸಲಿಂಗಪ್ಪ ಭೂತೆ, ರತನ್ ದೇಸಾಯಿ, ವೀರಣ್ಣ ಹುಬ್ಬಳ್ಳಿ, ಶಿವಶಂಕರ ದೇಸಾಯಿ, ಶರಣಪ್ಪ ಈಳಿಗೇರ್, ಅಯ್ಯನಗೌಡ ಕೆಂಚಮ್ಮನವರ, ಅಮರೇಶ ಹುಬ್ಬಳ್ಳಿ, ಶಿವಕುಮಾರ ನಾಗಲಾಪುರಮಠ, ಶಿವಲೀಲಾ ದಳವಾಯಿ, ಸಂತೋಷಿಮಾ ಜೋಶಿ, ಶಿವಪ್ಪ ವಾದಿ, ಶರಣಪ್ಪ ಬಣ್ಣದಬಾವಿ, ಮಂಜುನಾಥ ನಾಡಗೌಡ್ರ, ಫಕೀರಪ್ಪ ತಳವಾರ್, ಗಾಳೆಪ್ಪ ಓಜನಹಳ್ಳಿ ಇದ್ದರು.