ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಅಭೂತ ಪೂರ್ವ ಗೆಲುವು ದಾಖಲಿಸಿರುವುದಕ್ಕೆ ಅವರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿರಿಯ ಮುಖಂಡ ಕೃಷ್ಣ (ಕೋಟೆ ಕಿಟ್ಟಿ) ತಿಳಿಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗಾನಂದ ಮಾತನಾಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯ ಅಭ್ಯರ್ಥಿ ಡಾ. ಮಂಜುನಾಥ್ ಅವರನ್ನು ಆಯ್ಕೆ ಮಾಡಿದಾಗಲೇ ನಾವು ಜಯಗಳಿಸುವುದು ಶತಸಿದ್ಧವೆಂದು ತಿಳಿದಿತ್ತು. ಹೃದಯವಂತ ವ್ಯಕ್ತಿ ಮಂಜುನಾಥ್ ಅವರ ಈ ಐತಿಹಾಸಿಕ ಗೆಲುವಿಗೆ ಮುಖ್ಯ ಕಾರಣ ಕಾಂಗ್ರೆಸ್ ದುರಾಡಳಿತ, ನಾಯಕರ ದರ್ಪ ದೌರ್ಜನ್ಯದಿಂದ ಬೇಸತ್ತ ಪ್ರಜ್ಞಾವಂತ ಮತದಾರರರು ಉತ್ತಮ ತೀರ್ಪು ನೀಡಿದ್ದಾರೆ ಎಂದರು.
ಈ ವೇಳೆ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದರ್ಶನ್, ಮುಖಂಡ ರಾಜು, ರಾಮಕೃಷ್ಣ ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 03:ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.