ಕನ್ನಡಪ್ರಭ ವಾರ್ತೆ ಉಡುಪಿ
ಅವರು ಇಲ್ಲಿನ ಎಂ. ಜಿ. ಎಂ. ಕಾಲೇಜಿನ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ವಿಚಾರ ಸಂಕಿರಣದಲ್ಲಿ ಭೌತ ಶಾಸ್ತ್ರ ವಿಭಾಗ ಆಯೋಜಿಸಿದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ ನ ಕಾರ್ಯದರ್ಶಿ ಬಿ. ಪಿ. ವರದರಾಯ ಪೈ ಅವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ. ವಿ.ಯ ಭೌತ ಶಾಸ್ತ್ರ ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಡಾ. ಜಗನ್ನಾಥ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯ್ಕ, ಪ. ಪೂ. ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಎ., ಸಹಸಂಯೋಜಕ ಪ್ರೊ. ನೀಲಕಂಠ ದಂಡೋತಿ ಅವರು ವೇದಿಕೆಯಲ್ಲಿ ಇದ್ದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಸ್ವಾಗತಿಸಿ, ಭೌತ ಶಾಸ್ತ್ರ ಮುಖ್ಯಸ್ಥೆ ಪ್ರೊ. ಶೈಲಜಾ ಎಚ್. ವಂದಿಸಿದರು. ಉಪನ್ಯಾಸಕಿ ಸೌಮ್ಯಲತಾ ಪರಿಚಯಿಸಿದರು. ಉಪನ್ಯಾಸಕಿ ಡಾ. ಅಕ್ಷತಾ ನಿರೂಪಿಸಿದರು.