ಕನ್ನಡಪ್ರಭ ವಾರ್ತೆ ಚಿಂತಾಮಣಿ
ಪ್ರಕರಣಗಳ ಮಾಹಿತಿಗಳನ್ನು ಪಡೆದು ವೈಜ್ಞಾನಿಕವಾಗಿ ತನಿಖೆಯನ್ನು ಕೈಗೊಂಡು ತಾಲೂಕಿನ ಕದಿರಾಪುರ ಗ್ರಾಮದ ಕೆ.ಎನ್.ಚಂದ್ರ (26 )ವರ್ಷ ಆರೋಪಿಯನ್ನು ಮಾಲು ಸಮೇತ ವಶಕ್ಕೆ ಪಡೆದು ಆರೋಪಿಯಿಂದ ಒಟ್ಟು 6,16,640 ರು.ಗಳ ಬೆಲೆಬಾಳುವ ಬಂಗಾರದ ಒಡವೆಗಳನ್ನು ಮತ್ತು 1 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ಸರಗಳ್ಳತನ ಪ್ರಕರಣಗಳು, ಕೆಂಚಾರಹಳ್ಳಿ ವೃತ್ತದಲ್ಲಿ 1 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆಯಿಂದ ತಿಳಿದುಬಂದಿದೆ.ಒಟ್ಟು ಮೂರು ಸರಗಳ್ಳತನ ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಯಶ್ವಸಿಯಾದ ತಂಡಗಳ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಅಧೀಕ್ಷಕ ಕುಶಾಲ್ಚೌಕ್ಸೆ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗನ್ನಾಥ್ ರೈ ತಂಡಕ್ಕೆ ಪ್ರಶಂಸೆಯನ್ನು ತಿಳಿಸಿದ್ದಾರೆ.