ಆಂಧ್ರ ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ: 2 ಮಕ್ಕಳು ಸೇರಿ ಐವರ ಸಾವು

KannadaprabhaNewsNetwork |  
Published : Jun 14, 2025, 12:38 AM IST
ಫೋಟೋ: 13 ಹೆಚ್‌ಎಸ್‌ಕೆ 3, 4 ಮತ್ತು 53: ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಆಂಧ್ರ ಸಾರಿಗೆ ಬಸ್ - ಲಾರಿ ನಡುವೆ ಭೀಕರ ಅಪಘಾತ ನಡೆದು ಬಸ್‌ನ ಬಲಭಾಗ ನಜ್ಜುಗುಜ್ಜಾಗಿರುವುದು. | Kannada Prabha

ಸಾರಾಂಶ

ಜೂನ್ 13ರ ಶುಕ್ರವಾರ ತಡರಾತ್ರಿ 2 ಗಂಟೆಯ ಸಮಯದಲ್ಲಿ ತಿರುಪತಿಯಿಂದ ಬರುತ್ತಿದ್ದ ಆಂಧ್ರಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಲಾರಿಯ ಮದ್ಯೆ ಅಪಘಾತ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಹೊಸಕೋಟೆಆಂಧ್ರಪ್ರದೇಶದ ಸಾರಿಗೆ ಬಸ್‌ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಮಕ್ಕಳು ಸೇರಿ ಐದು ಜನ ಪ್ರಯಾಣಿಕರು ಸಾವನಪ್ಪಿರುವ ಘಟನೆ ತಾಲೂಕಿನ ಕೋಲಾರ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗೊಟ್ಟಿಪುರ ಗೇಟ್ ಬಳಿ ಸಂಭವಿಸಿದೆ.

ಜೂನ್ 13ರ ಶುಕ್ರವಾರ ತಡರಾತ್ರಿ 2 ಗಂಟೆಯ ಸಮಯದಲ್ಲಿ ತಿರುಪತಿಯಿಂದ ಬರುತ್ತಿದ್ದ ಆಂಧ್ರಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಲಾರಿಯ ಮದ್ಯೆ ಅಪಘಾತ ಸಂಭವಿಸಿದೆ. ಓವರ್ ಟೇಕ್ ಮಾಡುವ ಆತುರದಲ್ಲಿ ಬಸ್ ಲಾರಿಯ ಬಲಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ತಿರುಪತಿ ಜಿಲ್ಲೆಯ ಕೇಶವರೆಡ್ಡಿ (44), ತುಳಸಿ (23), ಯತ್ವಿಕ್ (1), ಪ್ರಣತಿ 4 ವರ್ಷ ಸ್ಥಳದಲ್ಲೆ ಮೃತಪಟ್ಟರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ತೂರು ಮೂಲದ ಶಾರದಾ (45) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20 ಜನರಿಗೆ ಹೆಚ್ಚು ಗಾಯಗಳಾಗಿದ್ದು ಹೊಸಕೋಟೆ ಟೌನ್ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿರುತ್ತಾರೆ.

ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಹೊಸಕೋಟೆ ಡಿವೈಎಸ್ಪಿ ಮಲ್ಲೇಶಯ್ಯ, ಸಂಚಾರಿ ಠಾಣೆ ಇನ್‌ಸ್ಪೆಕ್ಟರ್ ಶ್ರೀಕಂಠಯ್ಯ ಸೇರಿದಂತೆ ಸಿಬ್ಬಂದಿ ವರ್ಗ ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದರು. ಅಪಘಾತದಿಂದ ಸಾಕಷ್ಟು ಸಮಯ ಸಂಚಾರ ದಟ್ಟಣೆ ಸಹ ಉಂಟಾಗಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಎಸ್ಪಿ ಭೇಟಿ ಪರಿಶೀಲನೆ:

ಅಪಘಾತ ನಡೆದ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಶುಕ್ರವಾರ ಬೆಳಗಿನ ಜಾವ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಗಾಯಾಳುಗಳು ದಾಖಲಾಗಿದ್ದ ಹೊಸಕೋಟೆ ಸರ್ಕಾರಿ ಆಸ್ಪತ್ರೆ, ಎಂವಿಜೆ ಆಸ್ಪತ್ರೆ, ಸಿಲಿಕಾನ್ ಸಿಟಿ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈಧ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಫೋಟೋ: 13 ಹೆಚ್‌ಎಸ್‌ಕೆ 3, 4 ಮತ್ತು 53: ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಆಂಧ್ರ ಸಾರಿಗೆ ಬಸ್ - ಲಾರಿ ನಡುವೆ ಭೀಕರ ಅಪಘಾತ ನಡೆದು ಬಸ್‌ನ ಬಲಭಾಗ ನಜ್ಜುಗುಜ್ಜಾಗಿರುವುದು.4: ಅಪಘಾತ ನಡೆದ ಸ್ಥಳಕ್ಕೆ ಎಸ್ಪಿ ಸಿ.ಕೆ.ಬಾಬಾ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಡಿವೈಎಸ್ಪಿ ಮಲ್ಲೇಶಯ್ಯ ಅವರಿಂದ ಮಾಹಿತಿ ಪಡೆದರು.5: ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಭೇಟಿ ನೀಡಿ ವ್ಶೆದ್ಯರಿಂದ ಮಾಹಿತಿ ಪಡೆದ ಎಸ್‌ಪಿ ಸಿ.ಕೆ.ಬಾಬಾ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''