ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸಹಕಾರಿ: ನಿರ್ಮಲ ಅಭಿಮತ

KannadaprabhaNewsNetwork |  
Published : May 12, 2026, 01:45 AM IST
ಪಟ್ಟಣದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ 14ನೇ ಅಂಗನವಾಡಿ ಕೇಂದ್ರದಲ್ಲಿ ಸಿಡಿಪಿಓ ನಿರ್ಮಲಾ ಪುಟಾಣಿ ಮಕ್ಕಳಿಗೆ ಸಿಹಿ ವಿತರಣೆ ಮಾಡಿ ಅಂಗನವಾಡಿ ಕೇಂದ್ರಕ್ಕೆ ಬರ ಮಾಡಿಕೊಂಡರು | Kannada Prabha

ಸಾರಾಂಶ

ಖಾಸಗಿ ಕಾನ್ವೆಂಟ್‌ಗಳನ್ನು ಮೀರಿಸುವಂತೆ ಅಂಗನವಾಡಿ ಕೇಂದ್ರಗಳಲ್ಲಿ ಪುಟಾಣಿ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ದೊರೆಯುತ್ತಿದೆ. ನಿಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳಿಸಿ ಕಲಿಕಾ ಚತುರ ಪುಟಾಣಿ ಮಕ್ಕಳನ್ನಾಗಿ ರೂಪಿಸಿರಿ ಎಂದು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ನಿರ್ಮಲಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಇಂದಿನಿಂದ ತಾಲೂಕಿನ 402 ಅಂಗನವಾಡಿ ಕೇಂದ್ರಗಳು ಆರಂಭ

- - -

ಚನ್ನಗಿರಿ: ಖಾಸಗಿ ಕಾನ್ವೆಂಟ್‌ಗಳನ್ನು ಮೀರಿಸುವಂತೆ ಅಂಗನವಾಡಿ ಕೇಂದ್ರಗಳಲ್ಲಿ ಪುಟಾಣಿ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ದೊರೆಯುತ್ತಿದೆ. ನಿಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳಿಸಿ ಕಲಿಕಾ ಚತುರ ಪುಟಾಣಿ ಮಕ್ಕಳನ್ನಾಗಿ ರೂಪಿಸಿರಿ ಎಂದು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ನಿರ್ಮಲಾ ಹೇಳಿದರು.

ಅಂಗನವಾಡಿ ಪುಟಾಣಿಗಳಿಗೆ ಏ.16ರಿಂದ ಮೇ 10ರವರೆಗೆ ಬೇಸಿಗೆ ರಜೆ ನೀಡಲಾಗಿದ್ದು, ಸೋಮವಾರ ಪಟ್ಟಣದ ಜೆ.ಎಚ್.ಪಟೇಲ್ ಬಡಾವಣೆಯ 14ನೇ ಅಂಗನವಾಡಿ ಮತ್ತು ಕುರುಬರ ಬೀದಿಯ 2ನೇ ಅಂಗನವಾಡಿ ಕೇಂದ್ರಗಳಿಗೆ ಬಂದ ಪುಟಾಣಿ ಮಕ್ಕಳಿಗೆ ಸ್ವಾಗತ ಕೋರಿ, ಮಕ್ಕಳು-ಪೋಷಕರಿಗೆ ಸಿಹಿ ಹಂಚಿ ಅವರು ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸಹಕಾರಿಯಾಗಲಿವೆ. ಮಕ್ಕಳ ಮಾನಸಿಕ, ದೈಹಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುವಂತಹ ಕಲಿಕಾ ಸಾಮಥ್ಯ, ಪೌಷ್ಠಿಕ ಆಹಾರ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಗುಣವಾಗುವಂತಹ ಚಟುವಟಿಕೆಗಳನ್ನು ಕಲಿಸುವ ಮೂಲಕ ಪುಟಾಣಿಗಳ ಪ್ರಾಥಮಿಕ ಹಂತದ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವಲ್ಲಿ ಅಂಗನವಾಡಿ ಕೇಂದ್ರಗಳು ಶ್ರಮಿಸುತ್ತಿವೆ ಎಂದರು.

ಮೇಲ್ವಿಚಾರಕಿ ಪ್ರೇಮಾ ಮಾತನಾಡಿ, 3ರಿಂದ 6 ವರ್ಷಗಳ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಂಗನವಾಡಿ ಕೇಂದ್ರಗಳು ಶ್ರಮಿಸುತ್ತಿವೆ. ಕೇಂದ್ರಗಳಲ್ಲಿ ಕಲಿತ ಮಕ್ಕಳು ಪ್ರಾಥಮಿಕ ಹಂತದ ಶಿಕ್ಷಣದಲ್ಲಿ ಪ್ರತಿಭಾವಂತರಾಗಿರುತ್ತಾರೆ. ಇಂದಿನಿಂದ ತಾಲೂಕಿನ 402 ಅಂಗನವಾಡಿ ಕೇಂದ್ರಗಳು ಆರಂಭಗೊಂಡಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಕೆ.ಆರ್. ಪುಪ್ಪಾವತಿ, ಭಾರತಿ ಪ್ರಸಾದ್, ಸಹಾಯಕಿ ಗಂಗಮ್ಮ, ಪುಟಾಣಿ ಮಕ್ಕಳು ಸೇರಿದಂತೆ ಮಕ್ಕಳ ಪೋಷಕರು ಹಾಜರಿದ್ದರು.

- - -

-11ಕೆಸಿಎನ್‌ಜಿ1:

ಚನ್ನಗಿರಿಯ ಜೆ.ಎಚ್.ಪಟೇಲ್ ಬಡಾವಣೆಯ 14ನೇ ಅಂಗನವಾಡಿ ಕೇಂದ್ರದಲ್ಲಿ ಸಿಡಿಪಿಒ ನಿರ್ಮಲಾ ಪುಟಾಣಿ ಮಕ್ಕಳಿಗೆ ಸಿಹಿ ವಿತರಿಸಿ ಅಂಗನವಾಡಿ ಕೇಂದ್ರಕ್ಕೆ ಸ್ವಾಗತಿಸಿದರು. ಪೋಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೇರುಕುಪ್ಪೆ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟನೆ
ಬೇಲೂರು ಪುರಸಭೆ ಅಧ್ಯಕ್ಷರಾಗಿ ಅಕ್ರಮ್ ಶರೀಫ್ ಆಯ್ಕೆ