ಕನ್ನಡಪ್ರಭ ವಾರ್ತೆ ಶಹಾಪುರ
ಈ ವೇಳೆ ಮಾತನಾಡಿದ ಅಂಗನವಾಡಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಯಮನಮ್ಮ ದೋರನಹಳ್ಳಿ, ಕಳೆದ ಐದು ದಶಕಗಳಿಂದ ನಿಸ್ವಾರ್ಥವಾಗಿ ದುಡಿಯುತ್ತಿರುವ 26 ಲಕ್ಷ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರನ್ನು ಇನ್ನು ಕಾರ್ಮಿಕರನ್ನಾಗಿ ಗುರುತಿಸಲು ಕೇಂದ್ರ ಸರ್ಕಾರ ಸಿದ್ಧವಿಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ದೇಶದ ಜನರಲ್ಲಿ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಲ್ಲಿ ಅತಿ ಹೆಚ್ಚು ಅಪೌಷ್ಟಿಕತೆಯ ಸವಾಲನ್ನು ನಮ್ಮ ದೇಶ ಗಂಭೀರವಾಗಿ ಎದುರಿಸುತ್ತಿದೆ. ದೇಶದಲ್ಲಿ ಪ್ರತಿ ವರ್ಷ ಸರಾಸರಿ ಆರು ವರ್ಷದ ಒಳಗಿನ ಒಂಬತ್ತು ಲಕ್ಷ ಮಕ್ಕಳು ಸಾಯುತ್ತಿದ್ದಾರೆ. ಇದಕ್ಕೆ ಸರಕಾರವೇ ನೇರ ಹೊಣೆಯಾಗಿದೆ ಎಂದು ಅವರು ಆರೋಪಿಸಿದರು.ಅಂಗನವಾಡಿ ನೌಕರರ ಸಂಘದ ವಡಗೇರಾ ತಾಲೂಕಾಧ್ಯಕ್ಷೆ ಇಂದಿರಾದೇವಿ ಕೊಂಕಲ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತರು ಗ್ರಾಜುಟಿಗೆ ಹಾರರ್ ಎಂದು ಎರಡು ವರ್ಷ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅದನ್ನು ಜಾರಿ ಮಾಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ತಿಂಗಳಿಗೆ ಕನಿಷ್ಠ ವೇತನ 26 ಸಾವಿರ ರು.ಗಳು, ಮಾಸಿಕ ಪಿಂಚಣಿ 10 ಸಾವಿರ ರು.ಗಳು, ಪಿಎಫ್, ಈಎಸ್ಐ ಇತ್ಯಾದಿ ಕೂಡಲೇ ತೀರ್ಮಾನಿಸಿ ಜಾರಿ ಮಾಡಬೇಕು ಹಾಗೂ ಎಲ್ಲಾ ಯೋಜನಾ ಕಾರ್ಮಿಕರಿಗೆ ಅನ್ವಯವಾಗುವಂತೆ ಕೂಡಲೇ ವೇತನ ಆಯೋಗ ರಚನೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
-
- ಬಸಲಿಂಗಮ್ಮ ನಾಟೇಕಾರ, ಅಧ್ಯಕ್ಷೆ, ಅಂಗನವಾಡಿ ನೌಕರರ ಸಂಘ ಶಹಾಪುರ.