ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಕಟ್ಟಡಕ್ಕೆ ಕೇವಲ 8 ವರ್ಷ
ಕೇವಲ ೮ ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ಅಂಗನವಾಡಿ ಕಟ್ಟಡದ ಮೇಲ್ಛಾಣಿ ಬಿರುಕು ಬಿಟ್ಟು ಮಳೆ ಬಂದರೆ ನೀರು ಸೋರುತ್ತಿತ್ತು. ಈ ಬಗ್ಗೆ ಹಲವು ಬಾರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಶನಿವಾರ ಎಂದಿನಂತೆ ಮಕ್ಕಳು ಕೇಂದ್ರದಲ್ಲಿ ಕುಳಿತಿದ್ದಾಗ ಮೇಲ್ಚಾವಣಿಯ ಸಿಮೆಂಟ್ ಉದುರಿ ಮಕ್ಕಳ ತಲೆ ಮೇಲೆ ಬಿದ್ದಿದೆ. ಒಂದು ಮಗುವಿನ ಕಾಲಿನ ಮೇಲೆ ಬಿದ್ದು ಗಂಭೀರ ಗಾಯವಾಗಿದೆ. ತಕ್ಷಣವೆ ನಾಲ್ಕೂ ಮಕ್ಕಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಅಲ್ಲದೆ ತಾಲೂಕಿನಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ ಕಟ್ಟಡಗಳ ಸ್ಥಿತಿ ಗತಿ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ ಸಿಡಿಪಿಒ ಮುನಿರಾಜು ಮತ್ತು ಬಿಇಒ ಗುರುಮೂರ್ತಿಗೆ ಸೂಚಿಸಿ ಎಲ್ಲಿ ಸ್ವಂತ ಕಟ್ಟಡವಿಲ್ಲವೊ ಮತ್ತು ಎಲ್ಲಿ ಅವ್ಯವಸ್ಥೆಯಿಂದ ಕೂಡಿದೆಯೋ ಅಂತಹ ಕೇಂದ್ರಗಳನ್ನು ತಕ್ಷಣ ಬಾಡಿಗೆ ಕಟ್ಟಡಗಳಿಗೆ ಸ್ಥಳಾಂತರಿಸಲು ಸೂಚಿಸಿದರು.
ಶಿಥಿಲ ಕಟ್ಟಡಗಳ ಬಗ್ಗೆ ಮಾಹಿತಿ ಬಂದ ಬಳಿಕ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗುವೆ ಎಂದು ಭರವಸೆ ನೀಡಿದರು. ಘಟನಾ ಸ್ಥಳಕ್ಕೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾರಾಯಣಸ್ವಾಮಿ ಮತ್ತು ಉಪವಿಭಾಗಾಧಿಕಾರಿ ಮೈತ್ರಿ ಭೇಟಿ ನೀಡಿ ಪರಿಶೀಲಿಸಿದರು.ಗ್ರಾಮಸ್ಥರ ಆಕ್ರೋಶಅಂಗನವಾಡಿ ಕೇಂದ್ರಗಳು ತಾಲೂಕಿನಲ್ಲಿ ಹಲವು ಕಡೆ ಅವ್ಯವಸ್ಥೆಯಿಂದ ಕೂಡಿದ್ದರೂ ಆ ಕಡೆ ಅಧಿಕಾರಿಗಳು ಗಮನ ನೀಡುವುದಿಲ್ಲ. ಅನಾಹುತ ನಡೆದಾಗ ಮಾತ್ರ ಮಾರುದ್ದ ಭಾಷಣ ಮಾಡುತ್ತಾರೆ. ಸಿಡಿಪಿಒ ಯಾವ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲಿಸುವುದಿಲ್ಲ. ಬರೀ ಕಚೇರಿಗೆ ಮಾತ್ರ ಸೀಮಿತರಾಗಿದ್ದಾರೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.