ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಶಾಲಾ ಕಟ್ಟಡದ ಅವ್ಯವಸ್ಥೆ
ಮಳೆ ಬಂದರೆ ಸೋರುತ್ತಿತ್ತು, ಅಲ್ಲಲ್ಲಿ ಸಿಮೆಂಟ್ ಕಳಚಿ ಬೀಳುತ್ತಿತ್ತು,ಅವ್ಯವಸ್ಥೆಯಲ್ಲಿರುವ ಈ ಕಟ್ಟಡವನ್ನು ಬೇರೆಡೆ ಸ್ಥಳಾಂತರಿಸುವಂತೆ ಹಲವು ಬಾರಿ ಕಾರ್ಯಕರ್ತೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಉಪಯೋಗವಾಗಿರಲಿಲ್ಲ.ಇದರಿಂದ ಕೇಂದ್ರಕ್ಕೆ ಗ್ರಾಮಸ್ಥರು ಮಕ್ಕಳನ್ನು ದಾಖಲಿಸಲು ಹಿಂದೇಟು ಹಾಕುತ್ತಿದ್ದರು. ಅಂಗನವಾಡಿ ಕಾರ್ಯಕರ್ತೆ ಕಟ್ಟಡದಲ್ಲಿ ಮಕ್ಕಳನ್ನು ಕೂರಿಸಲು ಹೆದರಿ ಪುಟ್ಟ ಮಕ್ಕಳನ್ನು ಹೊರಗೆ ಕೂರಿಸಿ ಪಾಠ ಮಾಡುತ್ತಿದ್ದರು.ಈ ಬಗ್ಗೆ ಸಂಕ್ಷೀಪ್ತವಾಗಿ ಗುರುವಾರ ಕನ್ನಡಪ್ರಭದಲ್ಲಿ ವರದಿ ಪ್ರಕಟಿಸಲಾಗಿತ್ತು.ವರದಿಗೆ ಎಚ್ಚತ್ತೆ ಸಿಡಿಪಿಒ ಮುನಿರಾಜಪ್ಪ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರವನ್ನು ಪರಿಶೀಲಿಸಿ ಬಳಕೆಗೆ ಯೋಗ್ಯವಾಗಿಲ್ಲ ಎಂದು ತಿಳಿದು ಗ್ರಾಮದಲ್ಲಿರುವ ಮತ್ತೊಂದು ಬಳಕೆಯಾಗದ ಸರ್ಕಾರಿ ಶಾಲಾ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸಿದರು.ಹೊಸ ಕಟ್ಟಡ ನಿರ್ಮಾಣ
ದೇವಗಾನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಕಟ್ಟಡ ಬಳಕೆಗೆ ಯೋಗ್ಯವಾಗಿಲ್ಲದ ಕಾರಣ ಹೊಸ ಕಟ್ಟಡ ನಿರ್ಮಾಣವಾಗುವ ತನಕ ಮಕ್ಕಳ ದೃಷ್ಟಿಯಿಂದ ಸರ್ಕಾರಿ ಶಾಲೆಗೆ ಸ್ಥಾಳಾಂತರಿಸಲಾಗಿದೆ, ಶಾಸಕರ ಗಮನಕ್ಕೆ ತಂದು ಹೊಸ ಕಟ್ಟಡ ನಿರ್ಮಾಣಕ್ಕೆ ಮನವಿ ಮಾಡಲಾಗುವುದು ಎಂದು ಸಿಡಿಪಿಒ ಮುನಿರಾಜಪ್ಪ ತಿಳಿಸಿದರು.ತಾಲೂಕಿನಲ್ಲಿ ಯಾವ ಗ್ರಾಮದಲ್ಲಿ ಇಂತಹ ಅವ್ಯವಸ್ಥೆಯಿಂದಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡಿ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.