- ಹೊನ್ನಾಳಿಯಲ್ಲಿ ಸಂಘಟನಾ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಹೇಳಿದರು.ಶನಿವಾರ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಜರುಗಿದ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಐಸಿಡಿಎಸ್ ಯೋಜನೆ 50 ವರ್ಷ ಪುರೈಸುತ್ತಿರುವ ಈ ಸಂದರ್ಭಧಲ್ಲಿ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಕಾಯಂಗೊಳಿಸಬೇಕು. ಪೆನ್ಸನ್ ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಿ ದಿಟ್ಟವಾದ ಹೋರಾಟ ನಡೆಸಬೇಕಾಗಿದೆ. ಸಂಘಟನೆ ಹೋರಾಟಕ್ಕೆ ಕರೆ ಕೊಟ್ಟಾಗ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಸಂಘಟನೆ ಮುಖಂಡರಾದ ಮಮತಾ, ಸುಶೀಲ, ವಸಂತ, ಕೆ.ಜಿ ಗೀತಾ, ರೇಣುಕಾ, ಇತರರು ಇದ್ದರು. ಅಂಗನವಾಡಿ ಸಂಘಟನೆ ಹೊನ್ನಾಳಿ ತಾಲೂಕು ಸಮಿತಿ ಅಧ್ಯಕ್ಷೆ ಚನ್ನಮ್ಮ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
(ಕೋಟ್) ಆಡಳಿತ ನಡೆಸುವ ಸರ್ಕಾರಗಳು ನಮ್ಮನ್ನು ಕಡೆಗಣಿಸುತ್ತಿವೆ. ಐಸಿಡಿಎಸ್ ಯೋಜನೆ ದೇಶದಲ್ಲಿ 50 ವರ್ಷ ಪೂರೈಸಿದ್ದು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾಯಂಗೊಳಿಸದೇ ಸರ್ಕಾರಗಳು ವಂಚನೆ ಮಾಡುತ್ತಲೇ ಬರುತ್ತಿವೆ. ಸರ್ಕಾರ ಫಲಾನುಭವಿಗಳಿಗೆ ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ಕೊಡಲು ಒತ್ತಾಯಿಸಬೇಕು.
- - -
ಸಂಘಟನಾ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಮಾತನಾಡಿದರು.