ಅನಿಕೇತ ಬಳ್ಳಾರಿಗೆ ರಾಜ್ಯ ಬಾಲ ಗೌರವ ಪ್ರಶಸ್ತಿ

KannadaprabhaNewsNetwork |  
Published : Dec 19, 2025, 02:45 AM IST
18ಕೆಪಿಎಲ್24 ಕೊಪ್ಪಳದ ಅನಿಕೇತ ರಾಜೇಶ ಬಳ್ಳಾರಿಗೆ ೨೦೨೩-೨೪ ನೇ ಸಾಲಿನ  ಪ್ರತಿಷ್ಠಿತ  ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ಬಾಲಗೌರವ ಪ್ರಶಸ್ತಿ ಬೆಳಗಾವಿಯ ಸುವರ್ಣಸೌಧದ ಸಭಾಂಗಣದ ಭವ್ಯ ವೇದಿಕೆಯಲ್ಲಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ಕೊಪ್ಪಳ: ಕೊಪ್ಪಳದ ಅನಿಕೇತ ರಾಜೇಶ ಬಳ್ಳಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಿಂದ ನೀಡಲಾಗುವ ೨೦೨೩-೨೪ನೇ ಸಾಲಿನ ಪ್ರತಿಷ್ಠಿತ ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ ಬೆಳಗಾವಿಯ ಸುವರ್ಣಸೌಧದ ಸಭಾಂಗಣದ ಭವ್ಯ ವೇದಿಕೆಯಲ್ಲಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದ ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮತ್ತು ಇತರ ಗಣ್ಯರು,ಅಧಿಕಾರಿಗಳು ಉಪಸ್ಥಿತರಿದ್ದರು.

ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ೭ನೇ ತರಗತಿ ಓದುತ್ತಿರುವ ಅನಿಕೇತ ಬಳ್ಳಾರಿ ನಮ್ಮಭಾಷೆ - ನಮ್ಮ ಕನ್ನಡ ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದಾನೆ. ಉತ್ತಮ ಈಜುಪಟು ಮತ್ತು ನೃತ್ಯ ಪಟುವಾಗಿದ್ದಾನೆ. ಅನೀಕೇತ ಬಳ್ಳಾರಿಯ ಬಹುಮುಖ ಪ್ರತಿಭೆ ಗುರುತಿಸಿ ಕ್ರೀಡಾ ಕ್ಷೇತ್ರದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು