ಬೀದಿ ನಾಯಿಗಳ ನಿರ್ಬಂಧ ವಿರುದ್ಧ ಪ್ರಾಣಿಪ್ರಿಯರ ಪ್ರತಿಭಟನೆ

KannadaprabhaNewsNetwork |  
Published : Jan 05, 2026, 02:45 AM IST
ಪ್ರತಿಭಟನೆ ನಡೆಸುತ್ತಿರುವ ಪ್ರಾಣಿ ಪ್ರಿಯರು. | Kannada Prabha

ಸಾರಾಂಶ

ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ 2025ರ ನವೆಂಬರ್‌ 7ರಂದು ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಆದೇಶದ ವಿರುದ್ಧ ಮಂಗಳೂರಿನ ಪ್ರಾಣಿ ಪ್ರಿಯರು ಭಾನುವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರಾಣಿ ಪ್ರಿಯರು, ಪ್ರಾಣಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ 2025ರ ನವೆಂಬರ್‌ 7ರಂದು ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಆದೇಶದ ವಿರುದ್ಧ ಮಂಗಳೂರಿನ ಪ್ರಾಣಿ ಪ್ರಿಯರು ಭಾನುವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರಾಣಿ ಪ್ರಿಯರು, ಪ್ರಾಣಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಪ್ರಾಣಿಗಳನ್ನು ರಕ್ಷಿಸುವ ಭಿತ್ತಿಪತ್ರಗಳನ್ನು ಸಾಲಾಗಿ ಹಿಡಿದು ಪ್ರತಿಭಟನಾಕಾರರು ಪ್ರತಿಭಟಿಸಿದರು. ಬೀದಿ ನಾಯಿಗಳ ಮೇಲೆ ದೌರ್ಜನ್ಯಕ್ಕೆ ಕಾರಣವಾಗುವಂಥ ಕ್ರಮಗಳನ್ನು ಕೈಗೊಳ್ಳದಂತೆ ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಆನಿಮಲ್‌ ಕೇರ್‌ ಟ್ರಸ್ಟ್‌ನ ಸುಮಾ ನಾಯಕ್‌, ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ ಮಧ್ಯಂತರ ಆದೇಶಕ್ಕೆ ತಡೆ ನೀಡಬೇಕು. ಬೀದಿ ನಾಯಿಗಳಿಗೆ ಆಶ್ರಯ ತಾಣ ವ್ಯವಸ್ಥೆ ಮಾಡುವುದು ಅವೈಜ್ಞಾನಿಕ. ಅದು ಈ ಮೂಕ ಪ್ರಾಣಿಗಳಿಗೆ ಸೆಂಟ್ರಲ್‌ ಜೈಲಿನಂತಾಗಲಿದೆ. ಅದರ ಬದಲು ಲಸಿಕೆ ಮತ್ತು ಸಂತಾನ ಹರಣ ಕೇಂದ್ರಗಳನ್ನು ವೃದ್ಧಿಸಬೇಕು ಎಂದು ಆಗ್ರಹಿಸಿದರು.

ಜ.7ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ವೇಳೆ ಪ್ರಾಣಿಪ್ರಿಯರ ಅಹವಾಲುಗಳನ್ನು ಆಲಿಸಬೇಕು ಎಂದೂ ಸುಮಾ ನಾಯಕ್‌ ಒತ್ತಾಯಿಸಿದರು.

ಪ್ರಾಣಿ ಪ್ರಿಯರು ಹಾಗೂ ಪ್ರಾಣಿ ರಕ್ಷಕರಾದ ರಜನಿ ಶೆಟ್ಟಿ, ಉಷಾ ಸುವರ್ಣ, ಸಾಕ್ಷಿ, ತೌಶಫ್ ವಿಜಯ ಕೆ. ರಾವ್ ಮತ್ತಿತರರು ಇದ್ದರು.

----------

ಫೋಟೊ

4ಡಾಗ್‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ